ಒಬ್ಬ ವ್ಯಕ್ತಿಯ ಹುಟ್ಟು ಮತ್ತು ಸಾವು ಮುಖ್ಯವಲ್ಲ: ಕೋಬಾಳ

ಶಹಾಬಾದ:ಒಬ್ಬ ವ್ಯಕ್ತಿಯ ಹುಟ್ಟು ಮತ್ತು ಸಾವು ಮುಖ್ಯವಲ್ಲ.ಅವರು ಮಾಡಿದ ಸತ್ಕರ್ಮಗಳೇ ಶಾಶ್ವತವಾಗಿ ನಾಡಿನಲ್ಲೆಡೆ ನೆಲೆಯೂರುತ್ತವೆ ಎಂಬುದಕ್ಕೆ ತುಮಕೂರಿನ ಡಾ.ಶಿವಕುಮಾರ ಸ್ವಾಮೀಜಿಯವರೇ ಸಾಕ್ಷಿ ಎಂದು ವೀರಶೈವ ಸಮಾಜದ ಅಧ್ಯಕ್ಷ ಸೂರ್ಯಕಾಂತ ಕೋಬಾಳ ಹೇಳಿದರು.

ಅವರು ಶುಕ್ರವಾರ ನಗರದ ವೀರಶೈವ ಸಮಾಜದ ವತಿಯಿಂದ ನಗರದ ಶರಣಬಸವೇಶ್ವರ ದೇವಾಸ್ಥಾನದಲ್ಲಿ ಆಯೋಜಿಸಲಾದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರ ತೃತೀಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಪ್ರಿಲ್ ಒಂದರಂದು ಮೂರ್ಖರ ದಿನ ಎಂದು ಆಚರಿಸುತ್ತೆವೆ.ಆದರೆ ಅದೇ ದಿನದಂದು ಹುಟ್ಟಿದ ಶ್ರೀಗಳು ತಮ್ಮ ಸತ್ಯ ಶುದ್ಧಕಾರ್ಯ ಪ್ರಜ್ಞೆ ಹಾಗೂ ನಿಷ್ಕಾಮ ಭಾವದಿಂದ ಮೂರ್ಖರ ದಿನವನ್ನು ಸತತ ಪರಿಶ್ರಮ, ಅಧ್ಯ್ಯಯನ ಮಾಡಿದರೇ ಮೂರ್ಖ ದಿನದ ಬದಲಾಗಿ ಜ್ಞಾನಿಗಳ ದಿನವನ್ನಾಗಿ ಮಾಡಬಹುದೆಂದು ತೋರಿಸಿಕೊಟ್ಟಿದ್ದಾರೆ.ಯಾರಲ್ಲಿ ಬಸವಣ್ಣನವರ ತತ್ವ ಅನುಷ್ಠಾನಗೊಂಡಿರುತ್ತದೆಯೋ, ಅವರಲ್ಲಿ ಮೂಡನಂಭಿಕೆ, ಅಂಧಶ್ರದ್ದೆಗಳು ಎಂದಿಗೂ ಮನೆ ಮಾಡುವುದಿಲ್ಲ ಎಂಬುದಕ್ಕೆ ಶ್ರೀಗಳೇ ಉದಾಹರಣೆ ಎಂದರು.

ಶಿವಕುಮಾರ ಇಂಗಿನಶೆಟ್ಟಿ ಮಾತನಾಡಿ, ಇಂದಿಗೂ ಜನರಲ್ಲಿ ಏನಾದರೂ ಕಾವಿಗೆ ಬೆಲೆ ಮತ್ತು ಖದರ್ ಇದಿದ್ದೆಯಾದರೆ ಅದು ಶಿವಕುಮಾರ ಸ್ವಾಮೀಜಿಯಂತವರಿಂದ.ಅವರು ಯಾವುದೇ ಜಾತಿ-ಭೇಧವಿಲ್ಲದೇ ಹನ್ನೆರಡನೇಯ ಶತಮಾನದಲ್ಲಿ ನಡೆದ ಸಾಮಾಜಿಕ ಧಾರ್ಮಿಕ ಕ್ರಾಂತಿಯ ಹರಿಕಾರರಾದ ಬಸವಾದಿ ಶರಣರ ವಿಚಾಧಾರೆ ಚಿಂತನೆಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಅವುಗಳನ್ನು ಅನುಷ್ಠಾನಗೊಳಿಸಿದ ಮಹಾಶಿವಯೋಗಿಗಳು ಎಂಬ ಖ್ಯಾತಿಗೆ ಪಾತ್ರರಾದವರು.ಲಕ್ಷಾಂತರ ಬಡ ಮಕ್ಕಳಿಗೆ ಆಶ್ರಯ ನೀಡುವ ಮೂಲಕ ತ್ರಿವಿಧ ದಾಸೋಹಿಗಳೆಂಬ ಪ್ರೀತಿಯ ಅಭಿಮಾನ ಪಡೆದಿದ್ದಾರೆ ಎಂದರು.

ರಾಜಶೇಖರ ಘಂಟಿಮಠ, ಶರಣಯ್ಯಸ್ವಾಮಿ, ಅಣವೀರ ಇಂಗಿನಶೆಟ್ಟಿ, ಶರಣಬಸಪ್ಪ ಕೋಬಾಳ, ರಾಜು ಬೆಳಗುಂಪಿ, ಶರಣು ಜೇರಟಗಿ, ಶಂಭುಲಿಂಗ ಬುಳ್ಳಾ, ಸಿದ್ದೇಶ್ವರ ವಸ್ತ್ರದ್, ಮನೋಹರ್ ಮಾಟನಳ್ಳಿ, ಶರಣಯ್ಯ .ಎಮ್.ಆರ್, ಶಂಕರ ಕುಂಬಾರ, ಸಿದ್ರಾಮಪ್ಪ ಬೊಮ್ಮನಳ್ಳಿ,ರಾಜು ಕೋಬಾಳ, ಅರುಣ ಪಟ್ಟಣಕರ್,ಶಿವಾನಂದ ಪಾಟೀಲ, ಬಸವರಾಜ ಸಾತ್ಯಾಳ ಸೇರಿದಂರೆ ಮಹಿಳೆಯರು ಇದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

54 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420