ನೌಕರಿಗಿಂತ ಆಸಕ್ತಿ ಇರುವ ಕಲೆಗಳಲ್ಲಿ ತೊಡಗಿಕೊಳ್ಳಿ: ಶರಣಗೌಡ ಪಾಟೀಲ್

0
19

ಸುರಪುರ: ಇಂದಿನ ಯುವಜನರು ಮತ್ತು ವಿದ್ಯಾರ್ಥಿಗಳು ಸರಕಾರಿ ನೌಕರಿಗಾಗಿಯೇ ಪ್ರಯತ್ನಿಸುವುದಕ್ಕಿಂತ ವಿಶೇಷ ಆಸಕ್ತಿಇರುವ ಕಲೆಗಳಲ್ಲಿ ತೊಡಗಿಸಿಕೊಂಡು ವೃತ್ತಿ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ ಶರಣಗೌಡ ಪಾಟೀಲ್ ಜೈನಾಪುರ ಹೇಳಿದರು.

ನೆಹರು ಯುವ ಕೇಂದ್ರ ಕಲಬುರಗಿ, ಸಗರನಾಡು ಯುವಕಸಂಘ ಸಹಯೋಗದೊಂದಿಗೆ ರಂಗಂಪೇಟೆಯ ಬಸವಪ್ರಭು ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಇಂದು ಆಯೋಜಿಸಿದ್ದ ವೃತ್ತಿ ಕೌಶಲ್ಯ ಮಾರ್ಗದರ್ಶನ ಮತ್ತು ಆಪ್ತ ಸಲಹೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಇಂದಿನ ದಿನಮಾನಗಳಲ್ಲಿ ಅನೇಕ ಯುವಜನರು ನಿರೂದ್ಯೋಗ ಸಮಸ್ಯ ಎದರಿಸುತ್ತಿದ್ದು ಕೌಶಲ್ಯ ಅಭಿವೃದ್ಧಿ ಮೂಲಕ ಅನೇಕ ಯುವಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಯೋಜನೆಗಳು ರೂಪಗೊಳ್ಳುತ್ತಿದ್ದರು ಯುವಜನರ ನಿರಾಸಕ್ತಿ ಹೆಚ್ಚಾಗುತ್ತಿದೆ, ಅಲ್ಲದೆ ವೃತ್ತಿ ಕೌಶಲ್ಯದಲ್ಲಿಯು ಕೂಡ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Contact Your\'s Advertisement; 9902492681

ಉಪನ್ಯಾಸಕ ಬಲಭೀಮ ಪಾಟೀಲ್ ವ್ಯಕ್ತಿತ್ವ ವಿಕಸನ ಕುರಿತು, ಶ್ರೀಕಾಂತ ರತ್ತಾಳ ಕೋವಿಡ್-೧೯ ಜಾಗೃತಿ ಕುರಿತು, ರುದ್ರಪ್ಪ ಕೆಂಭಾವಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಂತರ ಮುಂದೇನು? ಎಂಬ ವಿಷಯಗಳ ಕುರಿತು ಮಾತನಾಡಿದರು. ಸಾಹಿತಿ ನಬಿಲಾಲ್ ಮಕಾಂದಾರ ಕಾರ್ಯಕ್ರಮ ಉದ್ಘಾಟಿಸಿದರು, ಯುವಕ ಸಂಘದ ಅಧ್ಯಕ್ಷ ಪ್ರಕಾಸ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮವನ್ನು ಕೃಷ್ಟ ದೇವತ್ಕಲ್ ನಿರೂಪಿಸಿದರು, ಪ್ರವೀಣ ಜಕಾತಿ ಸ್ವಾಗತಿಸಿದರು, ಸಿದ್ದಪ್ರಸಾದ ವಂದಿಸಿದರು. ಕಾರ್ಯಗಾರದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳೀಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here