ಸುರಪುರ: ಇಂದಿನ ಯುವಜನರು ಮತ್ತು ವಿದ್ಯಾರ್ಥಿಗಳು ಸರಕಾರಿ ನೌಕರಿಗಾಗಿಯೇ ಪ್ರಯತ್ನಿಸುವುದಕ್ಕಿಂತ ವಿಶೇಷ ಆಸಕ್ತಿಇರುವ ಕಲೆಗಳಲ್ಲಿ ತೊಡಗಿಸಿಕೊಂಡು ವೃತ್ತಿ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ ಶರಣಗೌಡ ಪಾಟೀಲ್ ಜೈನಾಪುರ ಹೇಳಿದರು.
ನೆಹರು ಯುವ ಕೇಂದ್ರ ಕಲಬುರಗಿ, ಸಗರನಾಡು ಯುವಕಸಂಘ ಸಹಯೋಗದೊಂದಿಗೆ ರಂಗಂಪೇಟೆಯ ಬಸವಪ್ರಭು ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಇಂದು ಆಯೋಜಿಸಿದ್ದ ವೃತ್ತಿ ಕೌಶಲ್ಯ ಮಾರ್ಗದರ್ಶನ ಮತ್ತು ಆಪ್ತ ಸಲಹೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಇಂದಿನ ದಿನಮಾನಗಳಲ್ಲಿ ಅನೇಕ ಯುವಜನರು ನಿರೂದ್ಯೋಗ ಸಮಸ್ಯ ಎದರಿಸುತ್ತಿದ್ದು ಕೌಶಲ್ಯ ಅಭಿವೃದ್ಧಿ ಮೂಲಕ ಅನೇಕ ಯುವಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಯೋಜನೆಗಳು ರೂಪಗೊಳ್ಳುತ್ತಿದ್ದರು ಯುವಜನರ ನಿರಾಸಕ್ತಿ ಹೆಚ್ಚಾಗುತ್ತಿದೆ, ಅಲ್ಲದೆ ವೃತ್ತಿ ಕೌಶಲ್ಯದಲ್ಲಿಯು ಕೂಡ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸಕ ಬಲಭೀಮ ಪಾಟೀಲ್ ವ್ಯಕ್ತಿತ್ವ ವಿಕಸನ ಕುರಿತು, ಶ್ರೀಕಾಂತ ರತ್ತಾಳ ಕೋವಿಡ್-೧೯ ಜಾಗೃತಿ ಕುರಿತು, ರುದ್ರಪ್ಪ ಕೆಂಭಾವಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಂತರ ಮುಂದೇನು? ಎಂಬ ವಿಷಯಗಳ ಕುರಿತು ಮಾತನಾಡಿದರು. ಸಾಹಿತಿ ನಬಿಲಾಲ್ ಮಕಾಂದಾರ ಕಾರ್ಯಕ್ರಮ ಉದ್ಘಾಟಿಸಿದರು, ಯುವಕ ಸಂಘದ ಅಧ್ಯಕ್ಷ ಪ್ರಕಾಸ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಕೃಷ್ಟ ದೇವತ್ಕಲ್ ನಿರೂಪಿಸಿದರು, ಪ್ರವೀಣ ಜಕಾತಿ ಸ್ವಾಗತಿಸಿದರು, ಸಿದ್ದಪ್ರಸಾದ ವಂದಿಸಿದರು. ಕಾರ್ಯಗಾರದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳೀಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…