ಆಳಂದ: ಪಟ್ಟಣದ ತಹಸೀಲ್ದಾರ ಕಚೇರಿಯ ಮುಂದೆ ವಿವಿಧ ಬೇಡಿಕೆಗೆ ಒತ್ತಾಯಿಸಿ ಭಾರತೀಯ ಖೇತ್ ಮಜ್ದೂರ ಯುನಿಯನ್ ಹಾಗೂ ಅಖಿಲ ಭಾರತ ಕಿಸಾನಸಭಾ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶಾನಿವಾರ ೨ನೇ ದಿನಕ್ಕೆ ಕಾಲಿಟ್ಟಿದೆ.
ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ ಅವರಿಗೆ ಮುಖಂಡರು ಮನವಿ ಸಲ್ಲಿಸಿ ಪಟ್ಟಣದ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನೀರಿನ ಸಮಸ್ಯೆ ಕೇವಲ ಗ್ರಾಮೀಣ ಭಾಗಕ್ಕೆ ಸೀಮಿತವಾಗಿಲ್ಲ. ಪಟ್ಟಣದಲ್ಲೂ ಹೊಸ ಬಡಾವಣೆ ಸೇರಿ ಇನ್ನಿತರ ಕಡೆ ಸಾಕಷ್ಟು ನೀರಿನ ಸಮಸ್ಯೆ ಎದುರಾಗಿದೆ. ಅಲ್ಲದೆ, ಹಲವಾರು ದಿನಗಳಿಂದ ಶುದ್ಧ ಕುಡಿಯುವ ನೀರಿನ ಬೇಡಿಕೆಗೆ ನಾಗರಿಕರು ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೂ ಇದುವರೆಗೂ ಕುಡಿಯಲು ನೀರು ಒದಗಿಸುತ್ತಿಲ್ಲ. ಈ ಕೂಡಲೇ ಕ್ರಮಕೈಗೊಂಡು ಶುದ್ಧ ನೀರು ಒದಗಿಸಬೇಕು ಎಂದು ಕಿಸಾನಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ ಅವರು ಮುಖ್ಯಾಧಿಕಾರಿಗಳಿಗೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಮುಖ್ಯಾಧಿಕಾರಿಗಳು, ನೀರು ಶುದ್ಧೀಕರಣ ಘಟಕದಲ್ಲಿ ಪೂರ್ಣವಾಗಿ ನೀರು ಶುದ್ಧೀಕರಿಸಲಾಗುತ್ತಿದೆ. ಇನ್ನೂ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಶುದ್ಧ ಘಟಕದ ಮೂಲಕ ಕಾರ್ಯಾರಂಭಿಸಲು ಈ ಕುರಿತು ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇನ್ನೂಳಿದ ಬೇಡಿಕೆಗೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ಸೂಕ್ತ ಕಾಮಗಾರಿಗೆ ಸೂಚಿಸದ ಮೇಲೆ ಧರಣಿ ಹಿಂದಕ್ಕೆ ಪಡೆಯಲಾಗುವುದು ಎಂದು ಪ್ರತಿಭಟನಾ ನಿರತರು ಘೋಷಿಸಿದರು.
ಇಂದಿನ ಸತ್ಯಾಗ್ರಹಕ್ಕೆ ನ್ಯಾಯವಾದಿ ಸಂಜಯ ನಾಯಕ, ಪುರಸಭೆ ಸದಸ್ಯ ಧೋಂಡಿಬಾ ಸಾಳುಂಕೆ, ಷಣ್ಮೂಖಪ್ಪ ಹಡಪದ, ಅಹ್ಮೆದ ಅಲಿ ಚುಲಬುಲ, ಶಫಿ ಸಗರಿ, ಫಕ್ರೋದ್ಧೀನ್ ಸಾವಳಗಿ ಮತ್ತಿತರರು ಬೆಂಬಲಿಸಿ ಭಾಗವಹಿಸಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…