ಆಹಾರದ ಅಭದ್ರತೆ ಹೋಗಲಾಡಿಸಿದ ಬಾಬು ಜಗಜೀವನರಾಮ: ವಿಜಯಕುಮಾರ ರಾಮಕೃಷ್ಣ

ಶಹಾಬಾದ:ಹಸಿರು ಕ್ರಾಂತಿಯ ಹರಿಕಾರರು ಎಂದು ಕರೆಸಿಕೊಳ್ಳುವ ಬಾಬು ಜಗಜೀವನರಾಮ ಅವರು ಆಹಾರದ ಅಭದ್ರತೆಯನ್ನು ಹೋಗಲಾಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಮಾತನಾಡಿದರು.

ಅವರು ಸೋಮವಾರ ಮಾದಿಗ ಸಮಾಜ ತಾಲೂಕಾ ಸಮಿತಿ ವತಿಯಿಂದ ನಗರದ ಬಸ್ ನಿಲ್ದಾಣದ ಸಮೀಪದ ಬಾಬು ಜಗಜೀವನರಾಮ ಮಾರ್ಗ ಹಾಗೂ ಜೆಪಿ ಕಾರ್ಖಾನೆಯ ಹತ್ತಿರ ವೃತ್ತದ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು.

ನಮ್ಮ ದೇಶದಲ್ಲಿ ಸ್ವಾತಂತ್ರ್ಯ ನಂತರದಲ್ಲಿ ಆಹಾರ ಸಮಸ್ಯೆ ವೀಪರಿತವಾಗಿತ್ತು.ಅದನ್ನು ಹೋಗಲಾಡಿಸಲು ನಮ್ಮ ಕೃಷಿಯಲ್ಲಿ ಬದಲಾವಣೆ ತರುವುದು ಮುಖ್ಯ ಎಂದು ಮನಗಂಡು ಆ ಸಮಯದಲ್ಲಿ ಕೃಷಿ ಸಚಿವರಾಗಿದ್ದ ಡಾ.ಬಾಬು ಜಗಜೀವನರಾಮ ಅವರ ಮಾಡಿದ್ದ ಕಾರ್ಯಗಳು ಪ್ರಶಂಸನೀಯ.ಹಾಗಾಗಿ ಅವರನ್ನು ನಾವು ಹಸಿರು ಕ್ರಾಂತಿಯ ಹರಿಕಾರ ಎಂದು ಕರೆಯುತ್ತೆವೆ.ಹೀಗೆ ಕೊಟ್ಟಂತಹ ಜವಾಬ್ದಾರಿಯನ್ನು ತುಂಬಾ ಪ್ರಾಮಾಣಿಕವಾಗಿ ನಿರ್ವಹಿಸಿ ಅಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಚಾಣಾಕ್ಷತನವನ್ನು ಜಗಜೀವನರಾಮ ಹೊಂದಿದ್ದರು ಎಂದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಿಕಾ ಪರಮೇಶ್ವರ ಮಾತನಾಡಿ, ದಲಿತಪರವಾಗಿ ಹೋರಾಟ ಮಾಡಿದವರಲ್ಲಿ ಪ್ರಮುಖವಾಗಿ ಅಂಬೇಡ್ಕರ್ ಮತ್ತು ಬಾಬುಜಗಜೀವನರಾಮ ಅವರ ಹೆಸರುಗಳು ಮುಂಚೂಣಿಗೆ ಸ್ಮರಿಸುವುದು ನಮ್ಮ ಕರ್ತವ್ಯ.ಆ ಮೂಲಕ ಅವರ ಕಾರ್ಯಗಳನ್ನು ಮೆಲಕು ಹಾಕಿ ಅಂತಹ ಕಾರ್ಯಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ದಲಿತ ಮಾದಿಗ ಸಮಾಜದ ಸಂಸ್ಥಾಪಕ ರಾಜ್ಯಾಧ್ಯಕ್ಷ ಲಿಂಗರಾಜ ತಾರಫೈಲ್ ಮಾತನಾಡಿ, ಮಾದಿಗ ಸಮಾಜದ ಬಂಧುಗಳು ಸಮಾಜದ ಸಂಘಟನೆಯಲ್ಲಿ ತೊಡಗುವ ಮೂಲಕ ರಾಜಕೀಯವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದೆ ಬರಬೇಕಾಗಿದೆ.ಅದಕ್ಕಾಗಿ ಎಲ್ಲರೂ ಒಂದಾಗಿ ಪರಸ್ಪರ ಸಹಬಾಳ್ವೆಯ ಮೂಲಕ ಸಮಾಜವನ್ನು ಕಟ್ಟುವಂತ ಕೆಲಸಕ್ಕೆ ಮುಂದಾಗಬೇಕೆಂದು ಹೇಳಿದರು.

ಮಾದಿಗ ಸಮಾಜ ತಾಲೂಕಾ ಸಮಿತಿಯ ಅಧ್ಯಕ್ಷ ಡಿ.ಡಿ.ಓಣಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕರ್ಮಚಾರಿ ಸಫಾಯಿ ಕರ್ಮಚಾರಿ ಆಯೋಗದ ನಿರ್ದೇಶಕರಾದ ಗೀತಾ ರಾಜು ವಾಡೇಕರ,ಆದಿ ಜಾಂಭವ ಕಲ್ಯಾಣ ಸಂಘದ ಅಧ್ಯಕ್ಷ ಎ.ಹೆಚ್.ನಾಗೇಶ, ಉಪಾಧ್ಯಕ್ಷ ಎಚ್.ಎಸ್.ಮಟ್ಟಿ, ಅಂಬಾರಾಯ ಬೆಳಕೋಟೆ, ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ,ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್,ಡಾ.ರಶೀದ್ ಮರ್ಚಂಟ, ಗಿರೀಶ ಕಂಬಾನೂರ,ಪರಮೇಶ್ವರ ಖಾನಾಪೂರ,ರಾಜು ಜಂಬಗಿ,ಶರಣು ಪಗಲಾಪೂರ, ದಸಂಸ ಮುಖಂಡರಾದ ಡಾ.ಮಲ್ಲೇಶಿ ಸಜ್ಜನ್,ಮರಿಯಪ್ಪ ಹಳ್ಳಿ,ತಿಪ್ಪಣ್ಣ ನಾಟೇಕಾರ, ಭಗವಾನ ದಂಡಗುಲಕರ್, ನಾಗಪ್ಪ ಬೆಳಮಗಿ,ಲೋಹಿತ್ ಕಟ್ಟಿ,ಡಾ.ಅಹ್ಮದ್ ಪಟೇಲ್,ಮಲ್ಕಣ್ಣ ಮುದ್ದಾ,ಮಹಾದೇವಪ್ಪ ಬಳಿಚಡಿ, ಅಬಿಬ್ ಖಾನ ವೇದಿಕೆಯ ಮೇಲಿದ್ದರು.

ರವಿ ಬೆಳಮಗಿ ನಿರೂಪಿಸಿದರು, ಶಿವರಾಜ ಕೋರೆ ಸ್ವಾಗತಿಸಿದರು, ಶರಣು ಪಗಲಾಪೂರ ಪ್ರಾಸ್ತಾವಿಕ ನುಡಿದರು, ಸಂತೋಷ ಹುಲಿ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420