ಬಿಸಿ ಬಿಸಿ ಸುದ್ದಿ

ಭಾರತೀಯ ಸಂವಿಧಾನಕ್ಕೆ ಡಾ. ಅಂಬೇಡ್ಕರರವರ ಕೊಡುಗೆ ಅನನ್ಯ- ಮಾರುತಿ ಗಂಜಗಿರಿ

ಕಲಬುರಗಿ: ಸರಕಾರಿ ಪದವಿ ಪೂರ್ವ ಕಾಲೇಜು ಹಾಗು ಸರಕಾರಿ ಪ್ರೌಢ ಶಾಲೆ ಚಂದನಕೇರಾ ಗ್ರಾಮದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳನ್ನು ಉದ್ದೇಶಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ನವದೆಹಲಿ ಕರ್ನಾಟಕ ಘಟಕದ ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಮಾರುತಿ ಗಂಜಗಿರಿ ಮಾತನಾಡಿದರು.

ಸಂವಿಧಾನ ದೇಶದ ಸಮಸ್ತ ಜನರನ್ನು ಏಕತೆಯಿಂದ ಕಂಡು ಅವರ ಆಶೋತ್ತರಗಳನ್ನು ಈಡೇರಿಸುವ ಕಲ್ಯಾಣ ದೃಷ್ಟಿಕೋನವನ್ನು ಹೊಂದಿದೆ. ಬಾಬಾಸಾಹೇಬ್ ರವರು ತಮ್ಮ ಜೀವನದಲ್ಲಿ ಅನುಭವಿಸಿದ ನೋವುಗಳನ್ನು ಇನ್ನೊಬ್ಬರು ಅನುಭವಿಸದೆ ಎಲ್ಲರೂ ತಲೆಯೆತ್ತಿ ಬದುಕುವಂತಾಗಲಿ ಎಂದು ಭಾವಿಸಿ ನಮ್ಮ ದೇಶಕ್ಕೆ ಅದ್ಭುತವಾದ ಕೊಡುಗೆಯನ್ನು ಸಂವಿಧಾನದ ರೂಪದಲ್ಲಿ ನೀಡಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ  ಜಾತಿ-ಮತ-ಪಂಥ ಧರ್ಮ ಇವುಗಳ ಬಂಧನಗಳನ್ನು ದಾಟಿ ನಾವೆಲ್ಲರೂ ಒಗ್ಗಟ್ಟಾಗಿ ರಾಷ್ಟ್ರವೇ ಮೊದಲು ಎಂಬ ಸಂಕಲ್ಪದೊಂದಿಗೆ ಬದುಕೋಣ ಎಂದು ನುಡಿದರು.

ಶಿಕ್ಷಕ ಮತ್ತು ವಿದ್ಯಾರ್ಥಿಗಳು ದೇಶದ ಬಹುದೊಡ್ಡ ಆಸ್ತಿ ಇವರ ಪರಸ್ಪರ ಹಿತದಲ್ಲಿ ದೇಶದ ಹಿತ ಅಡಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ  ಪ್ರಾಂಶುಪಾಲರಾದ ಶ್ರೀಮತಿ ಡಾ.ಕುಸುಮಾ ಪ್ರಕಾಶ ಪ್ರೌಢ ಶಾಲೆಯ ಮುಖ್ಯಗುರುಗಳಾದ ಮಂಜುನಾಥ ಕಟ್ಟಿ  SDMC  ಅಧ್ಯಕ್ಷರಾದ ರಾಜು ಮೇಲ್ಕೇರಿ ಉಪಾದ್ಯಕ್ಷರಾದ ಜಗನ್ನಾಥ ಪಡಶೆಟ್ಟಿ  ಮುಖ್ಯ ಅತಿಥಿಗಳಾಗಿ ಶಿವಶರಣಪ್ಪಾ ಮತಿವಂತ ಕೇಶ್ವಾರ ಪ್ರಕಾಶ ಚೆಂಗಟಿ  ಮೊಗಲಯ್ಯಾ ಗುತ್ತೆದಾರ್ ಅಶೋಕ ಉಪನ್ಯಾಸಕ ವೃಂದದವರು ಶಿಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago