ಶಹಾಬಾದ: ಗಣರಾಜ್ಯ ದಿನವನ್ನು ನಾವೆಲ್ಲರೂ ಧಾರ್ಮಿಕ ಹಬ್ಬಗಳಂತೆ ಮನೆಮನೆಗಳಲ್ಲಿ ಮನ ಮನಗಳಲ್ಲಿ ಆಚರಿಸುವಂತಾಗಬೇಕು ಎಂದು ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.
ಅವರು ಬುಧವಾರ ನಗರದ ಮಡ್ಡಿ ಪ್ರದೇಶದಲ್ಲಿರುವ ಸನ್ ಲೈಟ್ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಗಣರಾಜ್ಯ ದಿನ ಎಂದರೆ ಸರಕಾರಿ ರಜೆ, ಅನ್ನವಷ್ಟರ ಮಟ್ಟಿಗೆ ಇಂದಿನ ಬಹುತೇಕ ಭಾರತೀಯ ಪ್ರಜೆಗಳು ಈ ಸುಂದರ ದಿನವನ್ನು ಅಥೈಸಿಕೊಂಡಂತಿರುವುದು ಮಾತ್ರ ದುರ್ದೈವ. ಈ ದೇಶದ ಅಭಿವೃದ್ಧಿ, ರಾಜಕೀಯ ನೀತಿ, ದೇಶ ರಕ್ಷಣೆ, ನ್ಯಾಯಾಂಗ, ಕಾರ್ಯಾಂಗಗಳ ಬಗ್ಗೆ ಜನರಲ್ಲಿ ಗೌರವ ಮೂಡುವಂಥಹ ವಾತಾವರಣ ನಿರ್ಮಾಣವಾಗಬೇಕು. ಪ್ರತಿಯೊಬ್ಬ ಪ್ರಜೆಯಲ್ಲಿಯೂ ತಾನು ಭಾರತೀಯ ಎಂಬ ಪ್ರಜ್ಞೆ ಜಾಗೃತವಾಗಿರಬೇಕು ಎಂದು ಹೇಳಿದರು.
ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಸಮಾಜದ ಸರ್ವೋತೋಮುಖ ಅಭಿವೃದ್ಧಿ ಹಾಗೂ ಸಂಪೂರ್ಣ ಸ್ವಾತಂತ್ರ್ಯದ ಯಶಸ್ವಿ ದೇಶದ ಕನಸು ಕಂಡು ಈ ದೇಶಕ್ಕಾಗಿ ಸಂವಿಧಾನ ರಚಿಸಿ, ದಾರಿ ಹಾಕಿಕೊಟ್ಟ ಮಹಾನ್ ನಾಯಕರ ಮತ್ತು ಮಹಾತ್ಮರ ಉದ್ದೇಶ ನಿಜವಾಗಿಯೂ ಸಾಕಾರಗೊಳ್ಳಬೇಕಾದರೆ ದಾರಿ ತಪ್ಪದೇ ಸರಿ ದಾರಿಯಲ್ಲಿ ಸಾಗಬೇಕೆಂದು ಹೇಳಿದರು.
ನಗರಸಭೆಯ ಸದಸ್ಯರಾದ ರಜನಿಕಾಂತ ಕಂಬಾನೂರ, ಅವಿನಾಶ ಕಂಬಾನೂರ, ಮಹೇಶ ರಾಠೋಡ,ಧರ್ಮು ರಾಠೋಡ,ಬಸವರಾಜ, ಶಿಕ್ಷಕಿಯರಾದ ಮೇನಿಕಾ, ಸಾಬೇರಾ ಬೇಗಂ, ವಿತಾ ಕಾಂಬಳೆ, ಮೀನಾಕ್ಷಿ ಕಂಬಾನೂರ ಸೇರಿದಂತೆ ಶಾಲಾಮಕ್ಕಳು ಹಾಗೂ ಪಾಲಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…