ಬಿಸಿ ಬಿಸಿ ಸುದ್ದಿ

ದಲಿತ ನೌಕರರ ಮೇಲಿನ ದೌರ್ಜನ್ಯ ನಿಲ್ಲಿಸಲು ದಲಿತ ಸೇನೆ ಮನವಿ

ಸುರಪುರ: ನಗರದ ಬಸ್ ಡಿಪೋದಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ಬಾಬು ರಾಠೋಡ ಮತ್ತು ಸಂತೋಷ ಕುಮಾರ ಇವರ ಮೇಲಿನ ಸುಳ್ಳು ದೂರು ಹಿಂಪಡೆಯಬೇಕು ಮತ್ತು ಇಬ್ಬರು ನೌಕರರ ಉದ್ದೇಶಪೂರ್ವಕವಾಗಿ ಬೇರೆಡೆಗೆ ವರ್ಗಾವಣೆ ಮಾಡಿದ್ದನ್ನು ರದ್ದುಗೊಳಿಸುವಂತೆ ದಲಿತ ಸೇನೆಯಿಂದ ಎನ್‌ಇಕೆಆರ‍್ಟಿಸಿ ಕಲಬುರ್ಗಿ ವಿಭಾಗಿಯ ವ್ಯವಸ್ಥಾಪಕರಿಗೆ ಒತ್ತಾಯಿಸಿದ್ದಾರೆ.

ಈ ಕುರಿತು ಮನವಿ ಮಾಡಿಕೊಂಡಿರುವ ದಲಿತ ಸೇನೆಯ ಮುಖಂಡರು ತಹಸೀಲ್ದಾರ ಮೂಲಕ ಮನವಿ ಸಲ್ಲಿಸಿದ್ದು.ಬಾಬು ರಾಠೋಡ ಮತ್ತು ಸಂತೋಷ ಕುಮಾರ ಎಂಬುವವರು ದಲಿತ ಸಮುದಾಯಕ್ಕೆ ಸೇರಿದ ನೌಕರರಾಗಿದ್ದು,ಈ ಇಬ್ಬರು ಇದುವರೆಗೆ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ ಬಂದಿದ್ದಾರೆ.

ಇಲ್ಲಿಯ ಟ್ರಾಫಿಕ್ ಇನ್ಸ್ಪೇಕ್ಟರ್ ಗಿರೀಶ ಕುಮಟಳ್ಳಿಯವರು ಚಾಲಕರು ಮತ್ತು ನಿರ್ವಾಹಕರು ಲಂಚ ಕೊಡಬೇಕೆಂದು ಕೇಳುತ್ತಾರೆ ಎಂದು ನೇರವಾಗಿ ಆರೋಪಿಸಿ,ಇದನ್ನು ವಿರೋಧಿಸಿದ್ದರಿಂದ ಈ ಇಬ್ಬರು ನೌಕರರನ್ನು ಯಾದಗಿರಿ ವಿಭಾಗಿಯ ನಿಯಂತ್ರಣಾಧಿಕಾರಿ, ಡಿಪೋ ಮ್ಯಾನೆಜರ್ ಹಾಗು ಗಿರೀಶ ಕುಮಟಳ್ಳಿ ಸೇರಿ ಇವರ ಮೇಲೆ ಸುಳ್ಳು ದೂರು ನೀಡಿ ತೊಂದರೆ ನೀಡುತ್ತಿದ್ದಾರೆ.

ಕೂಡಲೆ ಈ ದೂರನ್ನು ವಾಪಸ್ಸು ಪಡೆಯಬೇಕು ಮತ್ತು ಉದ್ದೇಶಪೂರ್ವಕವಾಗಿ ಇವರನ್ನು ಬಳ್ಳಾರಿ ಮತ್ತು ಹೊಸಪೇಟೆ ಬಸ್ ಡಿಪೋಗಳಿಗೆ ವರ್ಗಾವಣೆ ಮಾಡಲಾಗಿದೆ.ಇವರ ವರ್ಗಾವಣೆಯನ್ನು ರದ್ದು ಮಾಡಿ ನ್ಯಾಯ ಒದಗಿಸಬೇಕು ಇಲ್ಲವಾದರೆ ಇದೇ ತಿಂಗಳ ೩೦ನೇ ತಾರೀಖಿನಿಂದ ಬಸ್ ಡಿಪೋ ಮುಂದೆ ಸತ್ಯಾಗ್ರಹ ಆರಂಭಿಸುವುದಾಗಿ ಮನವಿಯಲ್ಲಿ ಎಚ್ಚರಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420