ಈ ಸಲವೂ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲಿ ಶಾಸಕ ಡಾ. ಅಜಯ್ ಸಿಂಗ್ ನಿರ್ಧಾರ

ಜೇವರ್ಗಿ: ಅತಿವೃಷ್ಟಿ, ನೆರೆ ಹಾವಳಿ ಹಾಗೂ ಕೋವಿಡ್ ಕಾರಣದಿಂದಾಗಿ ಜನತೆ ಸಂಕಷ್ಟದಲ್ಲಿದ್ದಾರೆಂದು ಕಳೆದ 2 ವರ್ಷಗಳಿಂದ ತಮ್ಮ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಣೆ ಮಾಡಿಕೊಳ್ಳದ ಜೇವರ್ಗಿ ಶಾಸಕರು ಹಾಗೂ ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್ ಈ ಬಾರಿಯೂ ಇದೇ ಜನೇವರಿ 29 ರ ಶನಿವಾರಂದು ಇರುವ ತಮ್ಮ 48 ನೇಯ ಜನ್ಮ ದಿನವನ್ನು ಆಚರಿಸಿಕೊಳ್ಳದಿರಲು ನಿರ್ಧಾರ ಮಾಡಿದ್ದಾರೆ.

ಕೋವಿಡ್ 3 ನೇ ಅಲೆ ತೀವ್ರಗತಿಯಲ್ಲಿ ಪಸರಿಸುತ್ತಿದೆ, ಅತಿವೃಷ್ಟಿಯಿಂದ ಜನ ಹಾನಿ ಅನುಭವಿಸಿದ್ದಾರೆ. ಹೀಗೆ ಜನತೆ ಸಂಕಷ್ಟದಲ್ಲಿರುವಾಗ ತಾವು ಹುಟ್ಟುಹಬ್ಬ ಆಚರಿಸುವುದು ಸರ್ವಥಾ ಸರಿಯಾದ ಕ್ರಮವಲ್ಲ. ಆದ್ದರಿಂದ ಯಾರೂ ದುಂದುವೆಚ್ಚ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬ ಅದ್ದೂರಿಯಿಂದ ಆಚರಿಸುವುದು ಬೇಡವೆಂದು ತಮ್ಮೆಲ್ಲ ಕಾರ್ಯಕರ್ತರು, ಅಭಿಮಾನಿ ಬಳಗ ಹಾಗೂ ಪಕ್ಷದ ಮುಖಂಡರುಗಳಿಗೆ ಡಾ. ಅಜಯ್ ಸಿಂಗ್ ವಿನಿಮ್ರ ಪೂರ್ವಕ ಮನವಿ ಮಾಡಿದ್ದಾರೆ.

ಹುಟ್ಟುಹಬ್ಬ ಆಚರಣೆ ನಮ್ಮ- ನಿಮ್ಮ ನಡುವಿನ ಸ್ನೇಹ ಬಾಂಧವ್ಯದ ಸಂಕೇತ, ಇರುವಷ್ಟು ದಿನ ನಿಮ್ಮೆಲ್ಲರ ಬೆಂಬಲ, ಅಭಿಮಾನದೊಂದಿಗೆ ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಜನಸೇವೆ ಮಾಡುವ ಬಯಕೆ ತಮ್ಮದು ಎಂದಿರುವ ಡಾ. ಅಜಯ್ ಸಿಂಗ್ ಈ ಬಾರಿಯೂ ಜನ್ಮದಿನ ಆಚರಣೆ ಮಾಡಿಕೊಳ್ಳುವುದು ಬೇಡವೆಂಬ ತಮ್ಮ ನಿರ್ಧಾರಕ್ಕೆ ಬೆಂಬಲಿಸುವಂತೆ ಕಾರ್ಯಕರ್ತರು ಅಭಿಮಾನಿಗಳಲ್ಲಿ ಕೋರಿದ್ದಾರೆ.

ಜ. 29 ರ ತಮ್ಮ 48 ನೇ ಜನ್ಮದಿನದ ದಿನ ಜೇವರ್ಗಿ, ಕಲಬುರಗಿ, ಬೆಂಗಳೂರಿಗೆ ಅಭಿಮಾನಿಗಳು, ಕಾರ್ಯಕರ್ತರು ಬಂದು ತಮಗೆ ಶುಭ ಕೋರುವುದಾಗಲಿ, ಹಾರ ಹಾಕಿ ಅಭಿಮಾನ ತೋರುವುದಾಗಲಿ, ಶಾಲು ಹೊದಿಸುವಂಹ ಯಾವುದೇ ಆಚರಣೆ ಮಾಡುವುದು ಬೇಡ. ಅದರ ಬದಲಾಗಿ ತಾವುಗಳು ಇದ್ದಲ್ಲಿಯೇ, ನಿಮ್ಮನಿಮ್ಮ ವ್ಯಾಪ್ತಿಯಲ್ಲಿಯೇ ಸಮಾಜದಲ್ಲಿರುವ ಬಡವರು, ನಿರ್ಗತಿಕರಿಗೆ, ಕೋವಿಡ್ ಸಂತ್ರಸ್ತರಿಗೆ , ಬಡ ರೋಗಿಗಳಿಗೆ ಕೈಲಾದ ಸಹಾಯ- ಸಹಕಾರ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿ ಅಲ್ಲಿಂದಲೇ ತಮಗೆ ಶುಭ ಕೋರುವಂತೆಯೂ, ದೀರ್ಘಾಯುಷಿಯಗುವಂತೆ ಹರಸುವಂತೆಯೂ ಶಾಸಕರಾದ ಡಾ. ಅಜಯ್  ಸಿಂಗ್ ಜೇವರ್ಗಿ ಮತಕ್ಷೇತ್ರದ ಜನತೆಯಲ್ಲಿಯೂ, ತಮ್ಮೆಲ್ಲ ಅಭಿಮಾನಿ ಕಾರ್ಯಕರ್ತರು ಹಾಗೂ, ಪಕ್ಷದ ಮುಖಂಡರಲ್ಲಿ ಕೋರಿಕೊಂಡಿದ್ದಾರೆ.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

48 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420