ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ ಬೆಳೆಯಲಿ: ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್

ಕಲಬುರಗಿ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರೀಯವಾಗಿ ತೊಡಗಿಕೊಂಡು ವ್ಯಕ್ತಿತ್ವ ವಿಕಸನ ರೂಪಿಸಿಕೊಳ್ಳಬೇಕು ಎಂದು ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್ ಹೇಳಿದರು.

ನಗರದ ಹೊಸ ಜೇವರ್ಗಿ ರಸ್ತೆಯ ಎಂ.ಎನ್. ದೇಸಾಯಿ ಕಲಾ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ೭೩ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶಾಭಿಮಾನ, ದೇಶಪ್ರೇಮ, ದೇಶಭಕ್ತಿ ಬೆಳೆಸಿಕೊಂಡು ಸದೃಢ ಭಾರತ ರಾಷ್ಟç ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಹಿರಿದಾಗಿದೆ ಎಂದರು.

ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್ನ ಸಂಚಾಲಕಿ ಮಾಲಾ ಕಣ ್ಣ ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿ ಜೀವನ ಅತ್ಯಾಮುಲ್ಯ, ಈ ದಿಸೆಯಲ್ಲಿ ಕಠಿಣ ಪರಿಶ್ರಮ, ಅಧ್ಯಯನಶೀಲರಾಗಿ ಗುರಿ ತಲುಪಿ ಉನ್ನತ ಹಂತಕ್ಕೆ ಹೋದಾಗ ಮಾತ್ರ ಹೆತ್ತವರು, ಕಲಿತ ಶಾಲಾ ಕಾಲೇಜಿನ ಗುರುವೃಂದದವರ ಕೀರ್ತಿ ಹೆಚ್ಚಿಸಲು ಸಾಧ್ಯ ಎಂದು ಕರೆ ನೀಡಿದರು. ಇದೇ ವೇಳೆಗೆ ಪ್ರತಿಜ್ಞೆ ವಿಧಿ ಬೋಧಿಸಿದರು.

ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್ನ ಮತ್ತೊಬ್ಬ ಸಂಚಾಲಕಿ ಮಾಲಾ ದಣ್ಣೂರ ಅವರು, ವಿದ್ಯಾರ್ಥಿಗಳು ಗುರು ಹಿರಿಯರಿಗೆ ಪರಸ್ಪರವಾಗಿ ಗೌರವಿಸಬೇಕು. ಶಿಕ್ಷಣದಿಂದಲೇ ಬದುಕು ಬದಲಾಯಿಸಲು ಸಾಧ್ಯ ಎಂದರು. ಕಾಂಗ್ರೆಸ್ ಯುವ ಮುಖಂಡ ಯುನೂಸ್ ಪಟೇಲ್, ದೇಶಕ್ಕೆ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ಸ್ವಾತಂತ್ರ ಸಿಕ್ಕಿದ್ದು, ಇದಕ್ಕೆ ನಾವೆಲ್ಲರೂ ಭಾರತೀಯರಾಗಿ ಬಾಳೋಣ ಎಂದರು. ಅಭಿಷೇಕ ರಾಠೋಡ ಅನಿಸಿಕೆ ವ್ಯಕ್ತಪಡಿಸಿದರು. ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವೀರವನಿತೆ ಒಣಕೆ ಒಬ್ಬವ್ವ, ಬುದ್ದ, ಬಸವ ಮತ್ತು ಅಂಬೇಡ್ಕರ್, ಚಂದ್ರಶೇಖರ ಆಜಾದವರವರ ಛದ್ಮವೇಶದಲ್ಲಿ ವಿದ್ಯಾರ್ಥಿಗಳು ಕಾಣ ಸಿಕೊಂಡು ದೇಶಾಭಿಮಾನ ಮೂಡಿಸಿದರು.

ಸಂಸ್ಥೆಯ ಗೌರವ ಅಧ್ಯಕ್ಷ ಚಂದ್ರಕಾAತ ಎನ್. ದೇಸಾಯಿ ಅಧ್ಯಕ್ಷತೆವಹಿಸಿದ್ದರು. ಕಾಲೇಜಿನ ಅಧ್ಯಕ್ಷ ಸಂದೀಪ ಎನ್. ದೇಸಾಯಿ, ನ್ಯಾಯವಾದಿ ನಾಗೇಂದ್ರಪ್ಪ ಪೂಜಾರಿ ವೇದಿಕೆ ಮೇಲಿದ್ದರು. ಉಪನ್ಯಾಸಕರಾದ ಗಾಳೇಶ ಎಸ್, ಸುಪ್ರೀತಾ, ತ್ರಿವೇಣ , ಅನುರಾಧ, ಪ್ರಿಯಾಂಕ್, ಅನ್ನಪೂರ್ಣ, ಅಶ್ವಿನಿ, ಅಮರ, ಶೃತಿ, ರಾಧಿಕಾ ಗುತ್ತೇದಾರ್ ಸೇರಿದಂತೆ ಬೋಧಕೇತರ ಸಿಬ್ಬಂದಿ ವರ್ಗ ಇದ್ದರು. ಉಪನ್ಯಾಸಕ ಆನಂದತೀರ್ಥ ಜೋಶಿ ನಿರೂಪಿಸಿ, ಸ್ವಾಗತಿಸಿದರು. ನಾಗರಾಜ್. ಎಸ್. ಪಟ್ಟಣಕರ್ ವಂದಿಸಿದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

27 mins ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

48 mins ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

3 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420