ಕಲಬುರಗಿ: ಗಣರಾಜ್ಯೋತ್ಸವದ ದಿನದ ಅಂಗವಾಗಿ ತಾರಫೈಲ್ ಬಡಾವಣೆಯ ಸರಕಾರಿ ಶಾಲೆಯಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ನಿಂಗಮ್ಮ ಸಿ ಕಟ್ಟಿಮನಿಯವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಿಂಗರಾಜ ತಾರಫೈಲ್ ಅವರು ಮಾತನಾಡುತ್ತಾ ಹಿರಿಯರ ತ್ಯಾಗ ಬಲಿದಾನದಿಂದ ಸ್ವತಂತ್ರ ಸಿಕ್ಕ ನಂತರ ನಮ್ಮ ದೇಶಕ್ಕಾಗಿ ಸವಿಧಾನ ರಚನೆ ಮಾಡುವುದಕ್ಕೆ ಬಾಬಾಸಾಬ್ ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ಸವಿಧಾನ ರಚಿಸಲಾಯಿತು.
ಆದಕಾರಣ ನಮ್ಮೆಲ್ಲರ ಹಿರಿಯರ ತ್ಯಾಗ- ಬಲಿದಾನವನ್ನು ಇಂದು ನಾವೆಲ್ಲರೂ ನೆನೆಸುತ್ತ ಬದುಕಬೇಕಾಗಿದೆ ಹಾಗೂ ತಾವೆಲ್ಲ ಮುದ್ದು ಮಕ್ಕಳು ಕೂಡ ಮುಂದಿನ ದಿನಗಳಲ್ಲಿ ಈ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ತಾವುಗಳು ಕೂಡ ಯಾವುದೇ ಖಾಸಗಿ ಶಾಲೆಗಳ ಕ್ಕಿಂತಲೂ ಕಡಿಮೆ ಇಲ್ಲ ಎನ್ನುವುದನ್ನು ನಿರೂಪಿಸಬೇಕು ಎಂದು ಕಿವಿಮಾತನ್ನು ಹೇಳಿದ್ದರು ಹಾಗೂ ಅಂದಿನ ಕಾಂಗ್ರೆಸ್ ಸರ್ಕಾರವು ಲಾಹೋರಿನಲ್ಲಿ ನಡೆದ ಅಧಿವೇಶನದಲ್ಲಿ ಪೂರ್ಣ ಸ್ವರಾಜ್ ದಿನವೆಂದು ಘೋಷಿಸಿ ಸಂವಿಧಾನ ಜಾರಿಗೆ ತರಲಾಯಿತು ಅದಕ್ಕಾಗಿ ಇಂದು ಗಣರಾಜ್ಯೋತ್ಸವ ದಿನ ಎಂದು ಆಚರಿಸಲಾಗುತ್ತದೆ ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಶಿವರಾಮ ರಾಠೋಡ, ರಜನಿಕಾಂತ್ ಶಿವಕೇರಿ, ಭಾಗ್ಯಶ್ರೀ, ಶೋಭಾ ಪಾಟೀಲ್, ಸುಚಿತ್ರ ಮೇಡಂ, ಸುನಿಲ ದತ್, ಬಸಮ್ಮ ಮದರಕಲ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…