ಬಿಸಿ ಬಿಸಿ ಸುದ್ದಿ

ಪತ್ರಿಕೋದ್ಯಮ ವಿಭಾಗಕ್ಕೆ ಕುಲಪತಿ ಭೇಟಿ

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭೇಟಿ ನೀಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್ ಅವರು ವಿಭಾಗದ ಕುಂದು ಕೊರತೆ ಮತ್ತು ಸಿಬ್ಬಂದಿಗಳ, ವಿದ್ಯಾರ್ಥಿಗಳ ಹಾಜರಾತಿ, ತರಗತಿಗಳು ಹೇಗೆ ನಡೆಯುತ್ತಿದೆ ಎನ್ನುವುದನ್ನು ಪರಿಶೀಲನೆ ಮಾಡಿದರು.

ವಿಭಾಗದ ಶೈಕ್ಷಣಿಕ ಚಟುವಟಿಕೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಗಳ ಕುರಿತು ವಿಭಾಗದ ಸಂಯೋಜನಾಧಿಕಾರಿ ಡಾ. ಡಿ.ಬಿ ಪಾಟೀಲ್ ಅವರೊಂದಿಗೆ ಚರ್ಚಿಸಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಸಮೂಹ ಮಾಧ್ಯಮ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ವಿಶ್ವವಿದ್ಯಾಲಯ ಪೂರೈಸಲಿದೆ.

ಪ್ರಾಯೋಗಿಕವಾಗಿ ಕಲಿಕೆಗೆ ಅಗತ್ಯವಿರುವ ಮಾನವ ಸಂಪನ್ಮೂಲ ಬಳಕೆ ಮಾಡಿಕೊಂಡು ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಲು ಎಲ್ಲ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

ನಮ್ಮ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಾಧ್ಯಮ ಕ್ಷೇತ್ರದಲ್ಲಿ ಅಸಾಧ್ಯವಾದುದನ್ನು ಸಾಧಿಸಲು ಸ್ಥಳೀಯ ಹಾಗೂ ಪ್ರಾದೇಶಿಕ ಮಾಧ್ಯಮ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಪತ್ರಿಕೋದ್ಯಮ ವಿಭಾಗದ ಸಂಯೋಜನಾಧಿಕಾರಿಗೆ ಸಲಹೆ ನೀಡಿದರು.

ಈ ವಿಭಾಗದಲ್ಲಿ ಕಲಿತ ವಿದ್ಯಾರ್ಥಿಗಳು ರಾಜ್ಯದ ಮುದ್ರಣ ಮಾಧ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳಲ್ಲಿ ಹಾಗೂ ರಾಷ್ಟ್ರೀಯ ಮಟ್ಟದ ಸಂವಹನ ಸಂಯೋಜಕರಾಗಿ ಕೆಲಸ ಮಾಡುತ್ತಿರುವುದು ನಮಗೆ ಬಹಳ ಸಂತೋಷ ಅನಿಸುತ್ತದೆ ಎಂದು ಕುಲಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕೋದ್ಯಮ ವಿಭಾಗದ ಸಂಯೋಜನಾಧಿಕಾರಿ ಡಾ. ಡಿ.ಬಿ ಪಾಟೀಲ್, ಡಾ. ಕೆ. ಎಂ. ಕುಮಾರಸ್ವಾಮಿ, ಡಾ. ರಾಜಕುಮಾರ ಎಂ. ದಣ್ಣೂರ, ಡಾ. ಅಶೋಕ ದೊಡ್ಡಮನಿ, ವೆಂಕಟೇಶ್ ಕಡೂನ, ಶ್ರೀಮತಿ ರೀತು ತಲವಾರ, ಆನಂದ ಯಾತನೂರ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

3 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

5 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago