ಸುರಪುರ: ರಾಯಚೂರು ನ್ಯಾಯಾಲಯದಲ್ಲಿ ೭೩ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಡಾ:ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ತೆಗೆಯಿಸಿ ಅವಮಾನಿಸಿದ ಘಟನೆಯನ್ನು ಖಂಡಿಸಿ ಸುರಪುರ ನ್ಯಾಯಾಲಯದಲ್ಲಿ ಗುರುವಾರ ವಕೀಲರು ಕಲಾಪದಿಂದ ದೂರ ಉಳಿಯುವ ಮೂಲಕ ಘಟನೆಯನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಹಿರಿಯ ಸದಸ್ಯರಾದ ಉದಯಸಿಂಗ ಅವರ ನೇತೃತ್ವದಲ್ಲಿ ಸಭೆ ನಡೆಸಿ ರಾಯಚೂರು ನ್ಯಾಯಾಲಯದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ವೇಳೆ ಮಹಾತ್ಮ ಗಾಂಧಿ ಭಾವಚಿತ್ರದ ಪಕ್ಕದಲ್ಲಿಟ್ಟಿದ್ದ ಸಂವಿಧಾನ ಶಿಲ್ಪಿ ಡಾ:ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಯುವಂತೆ ಪಟ್ಟು ಹಿಡಿದು ಭಾವಚಿತ್ರ ತೆಗೆಯಿಸಿ ನಂತರ ಧ್ವಜಾರೋಹಣ ಮಾಡಿರುವ ಘಟನೆಯನ್ನು ವಕೀಲರು ಖಂಡಿಸುವುದಾಗಿ ತಿಳಿಸಿದರು.
ಅಲ್ಲದೆ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದಿನ ಕೋರ್ಟ್ ಕಲಾಪದಿಂದ ದೂರ ಉಳಿಯುವುದಾಗಿ ತಿಳಿಸಿ ನಂತರ ಸಭೆಯ ಠರಾವಿನ ಪ್ರತಿಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ಮತ್ತು ರಾಜ್ಯಪಾಲರಿಗೆ ಕಳುಹಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ಉದಯಸಿಂಗ,ಮಹ್ಮದ್ ಹುಸೇನ್,ರಮಾನಂದ ಕವಲಿ,ಎನ್.ಜೆ. ಬಾಕ್ಲಿ,ವಿ.ಎಸ್.ಬೈಚಬಾಳ, ಜಿ.ಆರ್.ಬನ್ನಾಳ,ಯಲ್ಲಪ್ಪ ಹುಲಿಕಲ್, ಗೋಪಾಲ ತಳವಾರ,ಆದಪ್ಪ ಹೊಸ್ಮನಿ,ಮಂಜುನಾಥ ಹುದ್ದಾರ,ಮಲ್ಲಣ್ಣ ಬೋವಿ,ನಂದಕುಮಾರ ಕನ್ನೆಳ್ಳಿ,ನಾಗಪ್ಪ ಚವಲ್ಕರ್,ಶ್ರೀದೇವಿ ಪಾಟೀಲ್,ಜಯಲಲಿತಾ ಪಾಟೀಲ್,ಸವಿತಾ ಪಾಟೀಲ್,ಚವ್ವಾಲಕ್ಷ್ಮೀ ಸೇರಿದಂತೆ ಇತರರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…