ಶಹಾಬಾದ: ರಾಯಚೂರು ಜಿಲ್ಲಾ ನ್ಯಾಯಾಲಯದ ಗಣರಾಜ್ಯೋತ್ಸವ ಸಂದರ್ಭ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ನಡೆಸಿ ಬೆಂಗಳೂರಿನ ಉಚ್ಛನ್ಯಾಲಯದ ನ್ಯಾಯಾಧೀಶರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ೭೩ನೇ ಗಣರಾಜ್ಯೋತ್ಸವ ಸಂದರ್ಭ ಜಿಲ್ಲಾ ರಾಯಚೂರ ಕೋರ್ಟ್ ಆವರಣದಲ್ಲಿ ಧ್ವಜಾರೋಹಣಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಂಬೇಡ್ಕರ್ ಮತ್ತು ಗಾಂಧೀಜಿ ಪೋಟೋ ಒಂದರ ಪಕ್ಕ ಒಂದು ಇಡಲಾಗಿತ್ತು.
ಈ ವೇಳೆ ಧ್ವಜಾರೋಹಣಕ್ಕೆ ಬರಲು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಜಿಲ್ಲಾ ನ್ಯಾಯಾಲಯದಲ್ಲಿ ಅಂಬೇಡ್ಕರ್ ಪೋಟೋ ತೆಗೆದು ಧ್ವಜಾರೋಹಣ ಮಾಡಿದ್ದಕ್ಕೆ ನ್ಯಾಯಾಧೀಶರ ವಿರುದ್ಧ ಆಕ್ರೋಶ ಹೊರಹಾಕಿದರು.
ಈ ರೀತಿ ಒಬ್ಬ ಜವಾಬ್ದಾರಿಯುತ ವ್ಯಕ್ತಿ ಮಾಡಿರುವುದು ಅಕ್ಷಮ್ಯ ಅಪರಾಧ, ತಕ್ಷಣ ನ್ಯಾಯಾಧೀಶರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು. ನ್ಯಾಯಾಧೀಶರು ಸಂವಿಧಾನವನ್ನು, ಶಿ?ಚಾರವನ್ನು ಪಾಲನೆ ಮಾಡಿ ಇತರರಿಗೆ ಮಾದರಿಯಾಗಬೇಕು. ಆದರೆ ಇಂಥ ಹೆಜ್ಜೆ ಇಟ್ಟು ಸಂವಿಧಾನನ ಶಿಲ್ಪಿಗೆ ಅಪಮಾನ ಮಾಡಲಾಗಿದೆ.ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಉಪತಹಸೀಲ್ದಾರ ಮಲ್ಲಿಕಾರ್ಜುನರೆಡ್ಡಿ ಮುಖಾಂತರ ಬೆಂಗಳೂರಿನ ಉಚ್ಛನ್ಯಾಲಯದ ನ್ಯಾಯಾಧೀಶರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಚಿತ್ತಾಪೂರ ತಾಲೂಕಾಧ್ಯಕ್ಷ ಸಾಯಬಣ್ಣ ಗುಡುಬಾ, ಸಿಪಿಐ(ಎಂ) ತಾಲೂಕಾ ಕಾರ್ಯದರ್ಶಿ ಶೇಖಮ್ಮ ಕುರಿ, ದಲಿತ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಪೂಜಪ್ಪ ಮೇತ್ರೆ, ಕರವೇ ತಾಲೂಕಾಧ್ಯಕ್ಷ ವಿಶ್ವರಾಜ ಫೀರೋಜಬಾದ, ದಸಂಸ ಸಂಘಟನಾ ಸಂಚಾಲಕ ಮಲ್ಲಣ್ಣ ಮಸ್ಕಿ ಸೇರಿದಂತೆ ಇತರರು ಇದ್ದರು.