ಕಲಬುರಗಿ: ರಾವೂರ ಗ್ರಾಮದ ವಾರ್ಡ ಸಂಖ್ಯೆ 01ರ ವಾಡಿ ರಸ್ತೆಯಿಂದ ಕನಕ ನಗರಕ್ಕೆ ಹೋಗುವ ಮುಖ್ಯ ರಸ್ತೆ ಹದೆಗೆಟ್ಟಿದು ಕೊಚ್ಚೆಯಲ್ಲಿ ಜನ ಬಿಳುವುದು ಆಸ್ಪತ್ರೆ ಸೇರುವುದು ಸಾಮಾನ್ಯದ್ದು, ಬಡಾವಣೆಯ ಸಮಸ್ಯೆ ನಿವಾರಿಸಲು ಆಗ್ರಹಿಸಿ ಗ್ರಾಮದ ನಿವಾಸಿ ಜಗದೇಶ ಪೂಜಾರಿ ರಾವೂರ ಅವರು ಗ್ರಾಮ ಪಂಚಾಯಿತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ವಾರ್ಡ್ ನಲ್ಲಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಜನರು ಚರಂಡಿಗೆ ಬೀಳುವುದು ಸಮಾನ್ಯವಾಗಿದೆ ಎಂದು ಅವರು ತಿಳಿಸಿದರು. ಅಲ್ಲದೆ ಬೀದಿ ದೀಪಗಳು ಇಲ್ಲದಿರುವುದರಿಂದ ಜನ ರಾತ್ರಿ ಹೊತ್ತು ರಸ್ತೆಯಲ್ಲಿ ಜಾರಿ ಬಿದ್ದು ಕೈ ಕಾಲು ಮುರಿದುಕೊಳ್ಳುವ ಹಂತ ತಲುಪುವಂತಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದರು.
ತಕ್ಷಣ ಬಡಾವಣೆಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲು ಹಾಗೂ ಬೀದಿ ದೀಪಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈ ಗೊಳ್ಳಬೇಕೆಂದು ಬಡವಾಣೆಯ ನಿವಾಸಿಗಳು ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಯಲ್ಲಾಲಿಂಗ, ರಾಮಲಿಂಗ, ಭೀಮಶಂಕರ, ಭೀಮರಾಯ ಎಮ್, ಭೀಮಶಂಕರ, ಸಾಬಣ್ಣ ಇದ್ದರು.
ಕಲಬುರಗಿ: ಪೆಟ್ರೋಲ್ ತುಂಬಿದ ಟ್ಯಾಂಕರ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭಿಸಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರ ವಾಡಿ…
ಶರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ಕಲಬುರಗಿ: ಶ್ರೀ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಇದೇ…
ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲೊಬ್ಬರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ 140 ನೇ ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲಾ…
ಕಲಬುರಗಿ: ವಾಡಿಯಲ್ಲಿ ಇತ್ತೀಚೆಗೆ ನಡೆದ ಸಿಡಿಲಘಾತ ಘಟನೆಯಲ್ಲಿ ಮೃತಪಟ್ಟ ಸತೀಶ್ ಮಾನೆ ಅವರ ಕುಟುಂಬಕ್ಕೆ ಸಂಸದ ಡಾ.ಉಮೇಶ್ ಜಾಧವ್ ಭೇಟಿ…
ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಳೆದ ಮೂರು ತಿಂಗಳಿಂದ ಸತತವಾಗಿ ಪರಿಶ್ರಮವಹಿಸಿ ಚುನಾವಣಾ ವಿಶ್ರಾಂತಿಯ ನಂತರ ಮತಗಣನೆಗೆ ಒಂದು ದಿನ ಬಾಕಿ…
ಕಲಬುರಗಿ: ವಿಧಾನ ಸಭೆಯಿಂದ ವಿಧಾನ ಪರಿಷತ್ಗೆ ದೈವಾರ್ಷಿಕ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ನಿರ್ದೇಶನದಂತೆ ಕಲಬುರಗಿ ಕಾಂಗ್ರೆಸ್…