ಕಲಬುರಗಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ೧೯೧ ನೇ ಸ್ಮರಣೋತ್ಸವ ನಿಮಿತ್ಯವಾಗಿ ಸಚಿವ ಮುರುಗೇಶ ಆರ್. ನಿರಾಣಿ ಅವರು ಪುತ್ಥಳಿಗೆ ಮಾಲಾರ್ಪಣೆ ಮಾಡಿ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪ್ರತಿಮೆ ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.
ಸಂಘದ ಕಾರ್ಯಕರ್ತರು ನಿರ್ಮಾಣ ಹಂತದಲ್ಲಿರುವ ಸಿ.ಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿಡಲು ಕೋರಿದರು. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಪರಿಗಣಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ ಸದಸ್ಯ ಬಿ ಜಿ ಪಾಟೀಲ್, ಶಿವರಾಜ ಪಾಟೀಲ್ ರದ್ದೇವಡಗಿ, ವಿದ್ಯಾಸಾಗರ ಕುಲಕರ್ಣಿ, ಧರ್ಮಣ್ಣ ದೊಡ್ಡಮನಿ, ಕನಕ ಗುರುಪೀಠದ ಸ್ವಾಮೀಜಿಗಳಾದ ಲಿಂಗಬಿರದೇವರು, ದೇವಿಂದ್ರಪ್ಪ ನಾಯ್ಕೋಡಿ, ಮಲ್ಲಿಕಾರ್ಜುನ ಪೂಜಾರಿ ಬಂಕುರ, ಗಿರೆಪ್ಪ ಕಟ್ಟಿಮನಿ. ಪರಮೇಶ ಆಲಗೂಡ, ಶರಣು ಬೇಲೂರ, ರವಿ ಪೂಜಾರಿ, ನಾಗೇಂದ್ರಪ್ಪ ಪೂಜಾರಿ ಇದ್ದರು.