ಕಲಬುರಗಿ: ಸಮುದಾಯದ ಮಹಿಳೆಯರಿಗೆ ಕ್ಷಯರೋಗ (ಟಿಬಿ) ಲಕ್ಷಣಗಳು ಇರುವ ಯಾವುದೇ ವ್ಯಕ್ತಿ ಗರ್ಭಿಣಿ ಮಹಿಳೆ , ಮಧುಮೇಹಿ, ರೋಗನಿರೋಧಕ ಶಕ್ತಿ ಕಡಿಮೆ ಇರುವಂತಹ ಮಹಿಳೆಯರು ಕಂಡು ಬಂದರೆ ಅವರಿಗೆ ಕ್ಷಯರೋಗ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಬೇಕು ಗುಣಮುಖವಾಗುವಂತಹ ರೋಗವಾಗಿದೆ ಇದರ ಬಗ್ಗೆ ಭಯ ಪಡದೆ ಕ್ಷಯ ಖಚಿತವಾಗಿರುವ ರೋಗಿಯು ಸರಿಯಾದ ರೀತಿಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖವಾದಗ ಕ್ಷಯರೋಗ ಮುಕ್ತ ಕರ್ನಾಟಕ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ಡಿ ಆರ್ ಟಿಬಿ ಡಾಟ್ಸ್ ಪ್ಲಾಸ್ ಮೇಲ್ವಿಚಾರಕ ಸುರೇಶ್ ದೊಡ್ಡಮನಿ ಹೇಳಿದರು.
ಅವರು ಅಫಜಲಪುರ ತಾಲ್ಲೂಕಿನ ದೇವಲ್ ಗಾಣಗಾಪುರ ಪಟ್ಟಣದ ಅಂಗನವಾಡಿ ಸಮುದಾಯ ಭವನ ಗಾಣಗಾಪೂರ. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಕಲಬುರಗಿ ಹಾಗೂ ತಾಲ್ಲೂಕ ಆರೋಗ್ಯ ಕೇಂದ್ರ . ಪ್ರಾಥಮಿಕ ಆರೋಗ್ಯ ಕೇಂದ್ರ ದೇವಲ್ ಗಾಣಗಾಪುರ ಅಫಜಲಪುರ. ಇವರ. ಸಂಯೋಗದಲ್ಲಿ ಹಮ್ಮಿಕೊಂಡ. ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ಸಾಮಾನ್ಯ ಪ್ರಜೆಗಳು ಕೈ ಜೋಡಿಸುವುದರ ಜೊತೆಗೆ ನಿಮ್ಮ ಊರಿನ ಸಮುದಾಯದ ಜನರಿಗೆ ಕ್ಷಯರೋಗ ಕುರಿತು ಅರಿವು ಮಾಹಿತಿ ನೀಡಬೇಕು ಅಂದಾಗ ಮಾತ್ರ ರೋಗ ತಡೆಯಲು ಸಾಧ್ಯವೆಂದರು ಅವರು ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕ್ರಮ ಅತಿ ಹೆಚ್ಚು ಸ್ಲಾಂ ಏರಿಯಾ.ವಲಸಿಗರಲ್ಲಿ ಟಿಬಿ ಲಕ್ಷಣ ಕಂಡುಬರುತ್ತಿದೆ ಇದರಿಂದ ಆಶಾ ಕಾರ್ಯಕರ್ತೆ ಮತ್ತು ಅಂಗನವಾಡಿ ಕೇಂದ್ರದ ಕಾರ್ಯಕರ್ತರಿಗೆ ಅರಿವು ಮೂಡಿಸಲು ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ 2025 ರ ಒಳಗೆ ಎಂಬ ಘೋಷವಾಕ್ಯದಂತೆ ಸಮುದಾಯದ ಜನರು ಕ್ಷಯರೋಗ ನಿರ್ಮೂಲನಗೆ ಪಣ ತೊಡಬೇಕೆಂದರು.
ನಂತರ ಜಿಲ್ಲಾ ಕ್ಷಯರೋಗ ಹಿರಿಯ ಆರೋಗ್ಯ ನೀರಿಕ್ಷಣಾ ಮೇಲ್ವಿಚಾರಕ ಗುಂಡಪ್ಪ ದೊಡ್ಡಮನಿ , ಅವರು ಮಾತನಾಡುತ್ತ ಪ್ರತಿ ಒಬ್ಬರು ತಮ್ಮ ಆರೋಗ್ಯದ ಕಡೆ ಲಕ್ಷವಹಿಸಬೇಕು, ಹಾಗೆ ಕ್ಷಯರೋಗ ಲಕ್ಷಣ ಬಂದರು ಹೇದರ ಬೇಕಿಲ್ಲ ಈ ಕ್ಷಯರೋಗ ಗುಣಪಡಿಸಲು ಸಾಧ್ಯ, ಪ್ರತಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಿಗೆ ತಾಲ್ಲೂಕಿನ ದಂತ್ಯ ಗ್ರಾಮದ ಜನರಿಗೆ ಮಾಹಿತಿ ನೀಡುವುದು ಬಹಳ ಮುಖ್ಯವಾಗಿದೆ ಅದರಿಂದ ಶಾಲಾ-ಕಾಲೇಜಿನಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುತ್ತಿದೆವೆ ಹಾಗೆ ಕ್ಷಯರೋಗ ಗಾಳಿ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುವಂತ ರೋಗವಾಗಿದ್ದು ಪ್ರತಿ ಒಬ್ಬರು ಎಚ್ಚರವಹಿಸಬೇಕು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಕ್ಷಯರೋಗ ಪರೀಕ್ಷೆ ಮತ್ತು ಚಿಕಿತ್ಸೆ ಸಂಪೂರ್ಣವಾಗಿ ಉಚಿತ ಇರುತ್ತದೆ. ಮತ್ತು ಆರು ತಿಂಗಳ ಚಿಕಿತ್ಸೆಯ ಸಂಧರ್ಭದಲ್ಲಿ ರೋಗಿಗಳಿಗೆ ನಿಕ್ಷಯ ಪೋಷಣಾ ಅಡಿಯಲ್ಲಿ ಪೌಷ್ಟಿಕ ಆಹಾರ ಸಂಬಂದ ಮಾಸಿಕ 500 ರೂ, ಗಳನ್ನು ಕೊಡಲಾಗುತ್ತದೆ ಇದರ ಉಪಯೋಗ ಪ್ರತಿ ರೋಗಿಯು ಪಡೆದುಕೊಳ್ಳತ್ತಿದ್ದರೆ, ಎಂದು ತಿಳಿಸಿದರು.
ಪ್ರಮುಖರಾದ ಕ್ಷಯರೋಗ ನಿರ್ಮೂಲನ ಕೇಂದ್ರದ ಜಿಲ್ಲಾ ಡಿ ಆರ್ ಟಿಬಿ ಸಮಾಲೋಚಕ ಮಂಜುನಾಥ ಕಂಬಾಳಿಮಠ ಮತ್ತು ತಾಲ್ಲೂಕ ಹಿರಿಯ ಕ್ಷಯರೋಗ ಮೇಲ್ವಿಚಾರಕ ಲೋಹಿತ ಕುಲಾಲಿ . ಅವರು ವಿದ್ಯಾರ್ಥಿಗಳ ಮೂರು ಗುಂಪು ಮಾಡಿ ರಸ ಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು ಹಾಗೆ ಕಾಲೇಜಿನ ಉಪನ್ಯಾಸಕರು ನಿರ್ಣಾಯಕರಾಗಿ, ಕ್ವಿಜ್ ಕಂಪಟೇಶನ ಅಂಕ ನೀಡಿದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ದ್ವೀತಿಯ ತೃತೀಯ ಬಹುಮಾನ ನೀಡಿ ಹುರಿದುಂಬಿಸಲಾಯಿತು . ನಂತರ ವಿದ್ಯಾರ್ಥಿಗಳಿಗೆ ನೀಡಿ ಬಿತ್ತಿ ಪತ್ರ ಮೂಲಕ ಜಾಗೃತಿ ಮೂಡಿಸಲಾಯಿತು.
ವೇದಿಕೆ ಮೇಲೆ ಪ್ರಮುಖರಾದ. ಜಿಲ್ಲಾ ಡಿ ಆರ್ ಟಿಬಿ ಟಿಸ್ ಸಮಾಲೋಚಕ ಮಂಜುನಾಥ ಕಂಬಾಳಿಮಠ ತಾಲ್ಲೂಕ ಹಿರಿಯ ಟಿಬಿ ಮೇಲ್ವಿಚಾರಕ ಲೋಹಿತ ಕುಲಾಲಿ. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಾಂತ ಹೈಯಾಳಕರ್, ಅಂಗನವಾಡಿ ಮೇಲ್ವಿಚಾರಕಿ ಪಾರ್ವತಿ ಹನ್ನೂರು. ಅವರು ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ತಾ ಪಂ ಅಧ್ಯಕ್ಷರಾದ ಕಲಾವತಿ , ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತರು, ಇತರರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು.