ಅಂಬೇಡ್ಕರ್‌ಗೆ ಅವಮಾನ: ನ್ಯಾಯಾದೀಶರ ವಜಾಗೆ ಆಗ್ರಹ

0
65

ಶಹಾಬಾದ: ರಾಯಚೂರಿನಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಅವಮಾನ ಮಾಡಿರುವ ಆರೋಪ ಎದುರಿಸುತ್ತಿರುವ ಅಲ್ಲಿನ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾ ಮಾಡಬೇಕು’ ಎಂದು ದಸಂಸ ಜಿಲ್ಲಾ ಸಂಚಾಲಕ ಭರತ್ ಧನ್ನಾ ಆಗ್ರಹಿಸಿದ್ದಾರೆ.

ಡಾ. ಬಿ.ಆರ್ . ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟರೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದ ವೃತ್ತಿ ಗೌರವಕ್ಕೆ ಅವಮಾನ ಮಾಡಿದಲ್ಲದೆ ಸಂವಿಧಾನಕ್ಕೆ ಮತ್ತು ಭಾರತ ರತ್ನ ಮಹಾನಾಯಕ ಸಂವಿಧಾನ ಶಿಲ್ಪಿ ಡಾ . ಬಿ.ಆರ್ . ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಈ ನ್ಯಾಯಾಧೀಶ ದೇಶ ದ್ರೋಹ ಕೃತ್ಯ ಮಾಡಿದ್ದು ಇವರ ಮೇಲೆ ರಾಷ್ಟ್ರ ದ್ರೋಹ ಪ್ರಕರಣವನ್ನು ದಾಖಲಿಸಬೇಕು.ಉಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು & ವೃತ್ತಿಯಿಂದ ವಜಾ ಮಾಡಬೇಕು. ಒಂದು ವೇಳೆ ಅವರಿಗೆ ವೃತ್ತಿಯಿಂದ ವಜಾಗೊಳಿಸುವಲ್ಲಿ ವಿಫಲವಾದಲ್ಲಿ ರಾಜ್ಯಾದ್ಯಂತ ದಸಂಸ ಸಂಘಟನೆಯಿಂದ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here