ಕ್ಷಯ ಮುಕ್ತ ಕರ್ನಾಟಕಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಿ: ದೊಡ್ಡಮನಿ

0
32

ಕಲಬುರಗಿ: ಮಕ್ಕಳಿಗೆ  ಕ್ಷಯರೋಗ  (ಟಿಬಿ) ಲಕ್ಷಣಗಳು ಇರುವ ಯಾವುದೇ ವ್ಯಕ್ತಿ ಕಂಡು ಬಂದರೆ ಅವರಿಗೆ ಕ್ಷಯರೋಗ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಬೇಕು ಗುಣಮುಖವಾಗುವಂತಹ ರೋಗವಾಗಿದೆ ಇದರ ಬಗ್ಗೆ ಭಯ ಪಡದೆ ಕ್ಷಯ ಖಚಿತವಾಗಿರುವ ರೋಗಿಯು  ಸರಿಯಾದ  ರೀತಿಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖವಾದಗ ಕ್ಷಯರೋಗ ಮುಕ್ತ ಕರ್ನಾಟಕ ಮಾಡಲು ಸಾಧ್ಯವಿದೆ ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಗ್ರಾಮದ ಜನರು ಕೈ ಜೋಡಿಸಬೇಕೆಂದು ಜಿಲ್ಲಾ ಡಿ ಆರ್ ಟಿಬಿ ಡಾಟ್ಸ್ ಪ್ಲಾಸ್ ಮೇಲ್ವಿಚಾರಕ ಸುರೇಶ್ ದೊಡ್ಡಮನಿ ಕರೆ ಕೊಟ್ಟರು.

ಅವರು ಯಾಡ್ರಾಮಿ ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯ ಆವರಣದಲ್ಲಿ . ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಕಲಬುರಗಿ ಹಾಗೂ ತಾಲ್ಲೂಕ ಆರೋಗ್ಯ ಕೇಂದ್ರ ಐಸಿ ಟಿಸಿ. ಆರ್ ಕೆ ಎಸ್ ಕೆ. ಯಾಡ್ರಾಮಿ ಇವರ. ಸಂಯೋಗದಲ್ಲಿ ಹಮ್ಮಿಕೊಂಡ.  ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅರಿವು ಕಾರ್ಯಕ್ರಮ ಅಭಿಯಾನ ಕಾರ್ಯಕ್ರಮದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ವಿದ್ಯಾರ್ಥಿಗಳಲ್ಲಿ ಹಾಗೆ  ಸಾಮಾನ್ಯ ಪ್ರಜೆಗಳು ಕೈ ಜೋಡಿಸುವುದರ  ಜೊತೆಗೆ ನಿಮ್ಮ ಊರಿನ ಸಮುದಾಯದ ಗ್ರಾಮದ ಜನರಿಗೆ ಕ್ಷಯರೋಗ  ಕುರಿತು ಅರಿವು ಮಾಹಿತಿ ನೀಡಬೇಕು ಅಂದಾಗ ಮಾತ್ರ ರೋಗ ತಡೆಯಲು ಸಾಧ್ಯವೆಂದರು ಅವರು ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಹೆಚ್ಚು ಟಿಬಿ ಲಕ್ಷಣ ಕಂಡುಬರುತ್ತಿದೆ ಇದರಿಂದ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು  ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ 2025 ರ ಒಳಗೆ ಎಂಬ ಘೋಷವಾಕ್ಯದಂತೆ ವಿದ್ಯಾರ್ಥಿಗಳು ಹಾಗೂ ಸಮುದಾಯದ ಜನರು ಕ್ಷಯರೋಗ ನಿರ್ಮೂಲನಗೆ ಪಣ ತೊಡಬೇಕೆಂದರು.

Contact Your\'s Advertisement; 9902492681

ನಂತರ ತಾಲ್ಲೂಕ ಕ್ಷಯರೋಗ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಆನಂದ ದೊಡ್ಡಮನಿ , ಅವರು ಮಾತನಾಡುತ್ತ  ಪ್ರತಿ ಒಬ್ಬರು ತಮ್ಮ ಆರೋಗ್ಯದ ಕಡೆ ಲಕ್ಷವಹಿಸಬೇಕು, ಹಾಗೆ ಕ್ಷಯರೋಗ ಲಕ್ಷಣ ಬಂದರು ಹೇದರ ಬೇಕಿಲ್ಲ ಈ  ಕ್ಷಯರೋಗ ಗುಣಪಡಿಸಲು ಸಾಧ್ಯ, ಹಾಗೆ ಗ್ರಾಮದ ಜನರಿಗೆ ಮಾಹಿತಿ ನೀಡುವುದು ಬಹಳ ಮುಖ್ಯವಾಗಿದೆ ಅದರಿಂದ  ಶಾಲಾ-ಕಾಲೇಜಿನಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುತ್ತಿದೆವೆ ಹಾಗೆ ಕ್ಷಯರೋಗ ಗಾಳಿ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುವಂತ ರೋಗವಾಗಿದ್ದು ಪ್ರತಿ ಒಬ್ಬರು ಎಚ್ಚರವಹಿಸಬೇಕು ಸರ್ಕಾರದ ಸೌಲಭ್ಯಗಳ ಸದುಪಯೋಗ  ಪಡಿಸಿಕೊಳ್ಳಬೇಕು ಕ್ಷಯರೋಗ ಪರೀಕ್ಷೆ  ಮತ್ತು ಚಿಕಿತ್ಸೆ  ಸಂಪೂರ್ಣವಾಗಿ ಉಚಿತ ಇರುತ್ತದೆ. ಮತ್ತು ಆರು ತಿಂಗಳ ಚಿಕಿತ್ಸೆಯ ಸಂಧರ್ಭದಲ್ಲಿ ರೋಗಿಗಳಿಗೆ ನಿಕ್ಷಯ ಪೋಷಣಾ ಅಡಿಯಲ್ಲಿ ಪೌಷ್ಟಿಕ ಆಹಾರ ಸಂಬಂದ ಮಾಸಿಕ  500 ರೂ, ಗಳನ್ನು ಕೊಡಲಾಗುತ್ತದೆ ಇದರ ಉಪಯೋಗ ಪ್ರತಿ ರೋಗಿಯು ಪಡೆದುಕೊಳ್ಳತ್ತಿದ್ದರೆ, ಅದರೆ ಇದರ ಅರಿವು ಗ್ರಾಮದ ಜನರಿಗೆ ಮುಟ್ಟಬೇಕಿದೆ ಎಂದು ತಿಳಿಸಿದರು.

ಪ್ರಮುಖರಾದ ಸಮುದಾಯ ಆರೋಗ್ಯ ಕೇಂದ್ರದ ಐಸಿ ಟಿಸಿ ಆಪ್ತ ಸಮಾಲೋಚಕಿ ಅಂಬಿಕಾ ಜಾನೆ  ಮತ್ತು ಆರ್ ಕೆ ಎಸ್ ಕೆ. ಅಪ್ತ ಸಮಾಲೋಚಕ ಅಶೋಕ ಬಡಿಗೇರ. ಅವರು ವಿದ್ಯಾರ್ಥಿಗಳ ಮೂರು ಗುಂಪು ಮಾಡಿ ರಸ ಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು  ಹಾಗೆ ಪ್ರೌಢ ಶಾಲೆಯ ಮು.ಗು ಬಸವರಾಜ ಹದನೂರ ನಿರ್ಣಾಯಕರಾಗಿ, ಕ್ವಿಜ್ ಕಂಪಟೇಶನ ಅಂಕ ನೀಡಿದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ದ್ವೀತಿಯ ತೃತೀಯ ಬಹುಮಾನ  ನೀಡಿ ಹುರಿದುಂಬಿಸಲಾಯಿತು . ನಂತರ ವಿದ್ಯಾರ್ಥಿಗಳಿಗೆ  ಬಿತ್ತಿ ಪತ್ರದ  ಮೂಲಕ ಜಾಗೃತಿ ಮೂಡಿಸಲಾಯಿತು.

ವೇದಿಕೆ ಮೇಲೆ ಪ್ರಮುಖರಾದ, ಮುಖ್ಯ ಗುರುಗಳಾದ ಬಸವರಾಜ ಹದನೂರ  ಅವರು ಅಧ್ಯಕ್ಷತೆ ವಹಿಸಿದ್ದರು.  ಆರೋಗ್ಯ ಮಿತ್ರ ವಿಜಯಲಕ್ಷ್ಮಿ ರಾಂಪೂರ. ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು.  ಆನಂದ  ಅವರು ನಿರೂಪಿಸಿದರು , ಅಶೋಕ ವಂದಿಸಿದ್ದರು. ಈ ಕಾರ್ಯಕ್ರಮದಲ್ಲಿ ,  ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಇತರರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here