ಬಿಸಿ ಬಿಸಿ ಸುದ್ದಿ

ಹುಮನಾಬಾದ್ ತಹಶಿಲ್ದಾರರ ಮೇಲೆ ಹಲ್ಲೆ ; ಹಲವರ ಬಂಧನ

ಬೀದರ್‌: ಮನವಿ ಸ್ವೀಕರಿಸಲು ಬರಲಿಲ್ಲ ಎಂದು ಆಕ್ರೋಶಗೊಂಡ ಪ್ರತಿಭಟನಾನಿರತ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು, ಶುಕ್ರವಾರ ಹುಮನಾಬಾದ್ ತಹಶೀಲ್ದಾರ್‌ ಕಚೇರಿಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದು, ತಹಶೀಲ್ದಾರ್ ಪ್ರದೀಪ್‌ ಹಿರೇಮಠ ಮೇಲೆ ಹಲ್ಲೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿ ಬಿಎಸ್‌ಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಕುಶ್ ಗೋಖಲೆ ಹಾಗೂ ಅವರ ಬೆಂಬಲಿಗರನ್ನು ಹುಮನಾಬಾದ್‌ ಪೊಲೀಸರು ಬಂಧಿಸಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಬಿಎಸ್‌ಪಿ ಕಾರ್ಯಕರ್ತರು, ಮನವಿಪತ್ರ ಸ್ವೀಕರಿಸಲು ಸ್ಥಳಕ್ಕೆ ಬರುವಂತೆ ತಹಶೀಲ್ದಾರರಿಗೆ ಮನವಿ ಮಾಡಿದರು.

‘ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಆಹಾರ ಪೂರೈಕೆ ಮಾಡುವವಿತರಕರೊಂದಿಗೆ ಸಭೆ ನಡೆಸುತ್ತಿದ್ದೆ. ಅಂಕುಶ್‌ ಗೋಖಲೆ ಅವರು ಮನವಿಪತ್ರ ಸ್ವೀಕರಿಸುವಂತೆ ಬಂದಿದ್ದರು. ಸಭೆ ಮುಗಿದ ತಕ್ಷಣ ಮನವಿ ಸ್ವೀಕರಿಸುತ್ತೇನೆ.
ಐದು ನಿಮಿಷ ಕಾಯುವಂತೆ ಹೇಳಿದೆ. ಅವರು ಈಗಲೇ ತೆಗೆದುಕೊಳ್ಳುವಂತೆಒತ್ತಾಯಿಸಿದಾಗ ಗ್ರೇಡ್‌-2 ತಹಶೀಲ್ದಾರ್‌
ಬಳಿ ಕೊಡುವಂತೆ ಸೂಚಿಸಿದೆ. ಅಷ್ಟಕ್ಕೇ ಅವರು ಕಿರುಚಾಡುತ್ತ ನನ್ನತ್ತ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾಲಿನಿಂದ ಗುಪ್ತಾಂಗಕ್ಕೆ ಒದ್ದಿದ್ದಾರೆ. ಅವರ ಹಿಂಬಾಲಕರು ಅಂಗಿ ಹಿಡಿದು ಎಳೆದಾಡಿದ್ದಾರೆ’ ಎಂದು ತಹಶೀಲ್ದಾರ್‌ ದೂರು ನೀಡಿದ್ದಾರೆ. ಹಲ್ಲೆಯ ವಿಡಿಯೊ ವೈರಲ್‌ ಆಗಿದೆ.

ತಹಶೀಲ್ದಾರ್ ಪ್ರದೀಪ್‌ ಹಿರೇಮಠ ಅವರು ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು. ಹಲ್ಲೆ ಖಂಡಿಸಿ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಿಎಸ್‌ಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಕುಶ್ ಗೋಖಲೆ, ಮುಜಿದ್‌ ಪಟೇಲ್, ರಾಜಕುಮಾರ ಶಿಂಧೆ, ದೇವೇಂದ್ರ, ದತ್ತಾತ್ತೇಯ ಅವರನ್ನು ಹುಮನಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಶೋಧ ನಡೆದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

38 mins ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

3 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

3 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

3 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

3 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

3 hours ago