ಬಿಸಿ ಬಿಸಿ ಸುದ್ದಿ

ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿನ ಅನ್ಯಾಯ ಸರಿಪಡಿಸಿ: ಅರ್ಷದ್ ದಖನಿ

ಸುರಪುರ:ರಾಜ್ಯದಲ್ಲಿ ೫೪೫ ಪಿಎಸ್‌ಐ ಸವಿಲ್ ಹುದ್ದೆಗಳ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯಾರ್ಥಿಗಳು ಉತ್ತಮ ಅಂಕ ಪಡೆದಿದ್ದರು ಅವರನ್ನು ಕೇವಲ ಕಲ್ಯಾಣ ಕರ್ನಾಟಕ ಭಾಗಕ್ಕೆ ಸೀಮಿತಿಗೊಳಿಸುವ ಮೂಲಕ ಈ ಭಾಗದ ಅಭ್ಯಾರ್ಥಿಗಳ ಮೆರಿಟ್ ಕಡೆಗಣಿಸಿದಂತಾಗಿದೆ.ಅದರಿಂದ ಕಲ್ಯಾಣ ಕರ್ನಾಟಕ ಭಾಗದ ೭೭ ಜನ ಉದ್ಯೋಗ ವಂಚಿತರಾಗುತ್ತಿದ್ದಾರೆ.ಆದ್ದರಿಂದ ಕೂಡಲೇ ಸರಕಾರ ಈಗ ಪ್ರಕಟಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ರಾಷ್ಟ್ರೀಯ ಟಿಪ್ಪು ಸುಲ್ತಾನ ಯುವಕ ಸಂಘದ ರಾಷ್ಟ್ರೀಯ ಅಧ್ಯಕ್ಷ ಅರ್ಷದ್ ದಖನಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಇದರ ಕುರಿತು ಸರಕಾರಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಜನ ಶಾಸಕರು ಸಂಸದರಿದ್ದರು ಇದರ ಕುರಿತು ಕೇವಲ ಸುರಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರೊಬ್ಬರೆ ವಿರೋಧ ವ್ಯಕ್ತಪಡಿಸುವ ಮೂಲಕ ಈ ಭಾಗದ ಅಭ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ.ಇನ್ನುಳಿದ ಶಾಸಕರು ಸಂಸದರಿಗೆ ಏನಾಗಿದೆ ಎಂದು ಪ್ರಶ್ನಿಸಿದ್ದಾರೆ.ಕೂಡಲೇ ಎಲ್ಲರು ಇದರ ವಿರುಧ್ಧ ಧ್ವನಿ ಎತ್ತಬೇಕು,ಕೂಡಲೇ ಈ ಭಾಗದ ಅಭ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಕಾರ ಸರಿಪಡಿಸಬೇಕು ಇಲ್ಲವಾದಲ್ಲಿ ಉಗ್ರ ಹೋರಾಟವನ್ನು ನಡೆಸಲಾಗುವುದು ಅಲ್ಲದೆ ಪ್ರತ್ಯೇಕ ರಾಜ್ಯಕ್ಕೆ ಧ್ವನಿ ಎತ್ತಬೇಕಾಗಲಿದೆ ಎಂದು ಎಚ್ಚರಿಸಿದ್ದಾರೆ.

ಈ ಭಾಗದ ಅಭ್ಯಾರ್ಥಿಗಳ ಪರವಾಗಿ ಧ್ವನಿ ಎತ್ತುವ ಮೂಲಕ ಕಾಳಜಿ ಮೆರೆದ ಶಾಸಕರಾದ ರಾಜುಗೌಡ ಅವರಿಗೆ ರಾಷ್ಟ್ರೀಯ ಟಿಪ್ಪು ಸುಲ್ತಾನ ಯುವಕ ಸಂಘ ಅಭಿನಂದನೆ ಸಲ್ಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago