ಕಲಬುರಗಿ: ಕನ್ನಡದ ರಥವನ್ನು ಜಿಲ್ಲೆಯಾದ್ಯಂತ ಸಮರ್ಪಕವಾಗಿ ಎಳೆಯಲು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಎರಡನೇ ಹಂತದ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಪರಿಷತ್ತಿನ ಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸಲು ವೇದಿಕೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ರಾಜ್ಯದ ಗಮನ ಸೆಳೆಯುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿತ್ಯ ನೂತನ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ. ಆ ಮೂಲಕ ಪರಿಷತ್ತು ಬದ್ಧತೆ ಮತ್ತು ನಿಸ್ವಾರ್ಥತೆಯಿಂದ ಕಾರ್ಯನಿರ್ವಹಿಸುತ್ತದೆ ಎಂದು ಅವರು ವಿವರಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿಯನ್ನಾಗಿ ಸಾಹಿತ್ಯ ಪ್ರೇರಕ-ಚಿಂತಕ ಯಶವಂತರಾಯ ಅಷ್ಠಗಿ, ಮಹಿಳಾ ಪ್ರತಿನಿಧಿಗಳಾಗಿ ಹಿರಿಯ ಲೇಖಕಿ ಶಕುಂತಲಾ ಪಾಟೀಲ ಜಾವಳಿ, ಸಮಾಜ ಸೇವಕಿ ಸ್ನೇಹಲತಾ ಸಂದೇಶ ಕಮಕನೂರ, ಸಂಘ-ಸಂಸ್ಥೆ ಪ್ರತಿನಿಧಿಯಾಗಿ ಗುರೂಜಿ ಪದವಿ ಮಹಾವಿದ್ಯಾಲಯದ ಸಂಸ್ಥಾಪಕ ಕಲ್ಯಾಣಕುಮಾರ ಶೀಲವಂತ, ಪರಿಶಿಷ್ಟ ಜಾತಿ ಪ್ರತಿನಿಧಿಗಳಾಗಿ ಉಪನ್ಯಾಸಕ ಡಾ.ಕೆ.ಗಿರಿಮಲ್ಲ, ಪತ್ರಕರ್ತ ಧರ್ಮಣ್ಣ ಧನ್ನಿ, ಪರಿಶಿಷ್ಟ ಪಂಗಡ ಪ್ರತಿನಿಧಿಯನ್ನಾಗಿ ಶಿಕ್ಷಕ ಸಂಗಪ್ಪ ಸೇದಿಮನಿ ಅವರನ್ನು ನೇಮಕ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಬದ್ಧರಾಗಿ ಕನ್ನಡಾಂಬೆಯ ಸೇವೆಯನ್ನು ಕೈಗೊಳ್ಳಲು ಅದೇಶದಲ್ಲಿ ಸೂಚಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…