ತಹಸೀಲ್ದಾರ್ ಮೇಲಿನ ಹಲ್ಲೆ ಖಂಡಿಸಿ ಸರಕಾರಿ ನೌಕರ ಸಂಘ ಪ್ರತಿಭಟನೆ

0
31

ಸುರಪುರ:ಬೀದರ್ ಜಿಲ್ಲೆಯ ಹುಮನಾಬಾದ್ ತಹಸೀಲ್ದಾರ್ ಮೇಲೆ ನಡೆದಿದೆ ಎನ್ನಲಾದ ಹಲ್ಲೆಯ ಘಟನೆಯನ್ನು ಖಂಡಿಸಿ ನಗರದ ತಹಸೀಲ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮುಖಂಡರು ಪ್ರತಿಭಟನೆಯನ್ನು ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂಜೀವ ದರಬಾರಿ ಮಾತನಾಡಿ,ಹುಮನಾಬಾದ್ ತಹಸೀಲ್ದಾರ್ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಖಂಡಿಸುವುದಾಗಿ ತಿಳಿಸಿದರು.ಅಲ್ಲದೆ ಕರ್ತವ್ಯನಿರತ ತಹಸೀಲ್ದಾರರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಅವರ ಮೇಲೆ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದ್ದು,ಕೂಡಲೇ ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Contact Your\'s Advertisement; 9902492681

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಗುರುಬಸಪ್ಪ ಹಾಗು ಕಂದಾಯ ಇಲಾಖೆಯ ಅನೇಕ ಸಿಬ್ಬಂದಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here