ಬಿಸಿ ಬಿಸಿ ಸುದ್ದಿ

ಹಲ್ಲೆಕೋರರನ್ನು ಬಂಧಿಸಿ, ಗಡಿ ಪಾರು ಮಾಡಿ’

ಹುಮನಾಬಾದ್: ತಹಶೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಘಟಕದಿಂದ ಶನಿವಾರ ಪಟ್ಟಣದ ಹಳೇ ತಹಶೀಲ್ ಕಚೇರಿಯಿಂದ ಮಿನಿವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಂತರ ಗ್ರೇಡ್ 2 ತಹಶೀಲ್ದಾರ್ ಜೈಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಪ್ರಮುಖರು ಮಾತನಾಡಿ, ಬಿ.ಎಸ್.ಪಿ. ಮುಖಂಡ ಮತ್ತು ಕೆಲ ಕಾರ್ಯಕರ್ತರು ಏಕಾಏಕಿಯಾಗಿ ತಹಶೀಲ್ ಕಚೇರಿಗೆ ನುಗ್ಗಿ ಅಧಿಕಾರಿಗಳ ಸಭೆಯಲ್ಲಿದ್ದ ತಹಶೀಲ್ದಾರ್ ಡಾ.ಪ್ರದೀಪಕುಮಾರ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೇ ಕಚೇರಿಯ ಪೀಠೋಪಕರಣ ಧ್ವಂಸ ಮಾಡಿರುವುದು ಖಂಡನೀಯವಾಗಿದೆ ಎಂದರು.

ಸರ್ಕಾರಿ ನೌಕರರ ಮೇಲೆ ಇತ್ತಿಚೆಗೆ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇದು ಹೀಗೆ ಮುಂದುವರಿದರೆ. ನೌಕರರು ಭಯದ ಆತಂಕದಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣಗೊಳ್ಳುತ್ತದೆ. ಹೀಗಾಗಿ ನೌಕರರಿಗೆ ಸೂಕ್ತ ರಕ್ಷಣೆ ನೀಡಿ ಹಲ್ಲೆಕೋರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ತಾಲ್ಲೂಕು ಅಧ್ಯಕ್ಷ ನಾಗಶೆಟ್ಟಿ ಡುಮಣಿ, ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಮಠಪತಿ, ಮಲ್ಲಿಕಾರ್ಜುನ ಸಂಗಮಕರ್, ಸಂಗಮೇಶ ಜಂಬಗಿ, ಶರದಕುಮಾರ್ ನಾರಾಯಣಪೇಟ್, ಗೋರಕನಾಥ, ಈಶ್ವರ ತಡೋಳ, ಸುರೇಶ, ಮುರುಗೇಂದ್ರ ಸಜ್ಜನಶೆಟ್ಟಿ, ಶ್ರೀಕಾಂತ ಪಾಟೀಲ, ಸಾರಿಕಾ ಗಂಗಾ, ಶ್ರೀಕಾಂತ ಸೋಗಿ, ಭಕ್ತಿರಾಜ, ಅಲಿಮ್, ರಾಜೇಂದ್ರ ಇದ್ದರು.

ಹುಮನಾಬಾದ್: ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ತಾಲ್ಲೂಕು ಘಟಕದಿಂದ ತಹಶೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ಶನಿವಾರ ಗ್ರೇಡ್ 2 ತಹಶೀಲ್ದಾರ್ ಜೈಶ್ರೀ ಅವರಿಗೆ ಸಲ್ಲಿಸಲಾಯಿತು.

ನಂತರ ಪ್ರಮುಖರು ಮಾತನಾಡಿ, ಕರ್ತವ್ಯದಲ್ಲಿದ್ದ ತಹಶೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ ಅವರ ಮೇಲೆ ನಡೆದ ಹಲ್ಲೆ ಸಂಘ ತೀವ್ರವಾಗಿ ಖಂಡಿಸುತ್ತಿದೆ. ಹಲ್ಲೆ ಮಾಡಿದ್ದವರನ್ನು, ಗೂಂಡಾ ಕಾಯ್ದೆಯಡಿ ಬಂಧಿಸಿ ಕನಿಷ್ಠ 5 ವರ್ಷ ಗಡಿಪಾರು ಮಾಡಬೇಕು ಎಂದರು.

ಸಂಘದ ತಾಲ್ಲೂಕು ಅಧ್ಯಕ್ಷ ಧರ್ಮಣ್ಣ ಹಂಜಗಿ, ಗೌರವಾಧ್ಯಕ್ಷ ಹಣಮಂತಪ್ಪಾ ಬಿರಾದರ್, ಉಪಾಧ್ಯಕ್ಷ ಕೃಷ್ಣ ಡಿ., ಪ್ರಧಾನ ಕಾರ್ಯದರ್ಶಿ ಮಾಹಾಂತೇಶ, ಮಹೇಶ ಇದ್ದರು.

ಹುಮನಾಬಾದ್: ಕರ್ತವ್ಯದಲ್ಲಿದ್ದ ತಹಶೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ ಅವರ ಮೇಲೆ ಬಿಎಸ್.ಪಿ ಮುಖಂಡ ಅಂಕುಶ್ ಗೋಖಲೆ ಹಾಗೂ ಇತರರು ಸೇರಿ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಜಂಗಮ ಅಭಿವೃದ್ಧಿ ಸಂಸ್ಥೆಯ ತಾಲ್ಲೂಕು ಘಟಕದಿಂದ ಶನಿವಾರ ಪಟ್ಟಣದ ಥೇರ ಮೈದಾನದಿಂದ ತಹಶೀಲ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರೇಡ್ 2 ತಹಶೀಲ್ದಾರ್ ಜೈಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ನಂತರ ಪ್ರಮುಖರು ಮಾತನಾಡಿ, ಬಿ.ಎಸ್.ಪಿ. ಮುಖಂಡ ಹಾಗೂ ಇತರರು ಸೇರಿ ತಹಶೀಲ್ದಾರ್ ಡಾ.ಪ್ರದೀಪಕುಮಾರ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕಾಲಿನಿಂದ ಗುಪ್ತಾಂಗಕ್ಕೆ ಒದ್ದಿರುವುದಲ್ಲದೇ ಜೀವ ಬೇದರಿಕೆ ಹಾಕಿರುವುದು ಖಂಡನೀಯವಾಗಿದೆ. ಹಲ್ಲೆಕೋರರನ್ನು ಕಾನೂನಿನ ಪ್ರಕಾರ ಕಠಿಣ ಕ್ರಮ ಜರುಗಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಸಯ್ಯಾ ಸ್ವಾಮಿ, ಶಿವಲಿಂಗ ಸ್ವಾಮಿ, ಸಚಿನ್ ಮಠಪತಿ, ರವಿ ಸ್ವಾಮಿ ನಿರ್ಣಾ, ಸಿದ್ದು ಹಿರೇಮಠ, ಸಿದ್ದು ಚಕಪಳ್ಳಿ, ಸುನೀಲ ಪತ್ರಿ, ಸುಭಾಷ ಇದ್ದರು.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

2 mins ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

42 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

3 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago