ಬೀದರ್ ಬಿಮ್ಸ್ ನಲ್ಲಿ ಅಕ್ರಮ ನೇಮಕಾತಿ, ಸಿಬ್ಬಂದಿಗಳ ವೇತನ ಬಾಕಿ: ತನಿಖೆ

ಬೀದರ್ : ಬ್ರಿಮ್ಸ್‌ನಲ್ಲಿ ಸಿಬ್ಬಂದಿ ವೇತನ ಬಾಕಿ ಮತ್ತು ಅಕ್ರಮ ನೇಮಕಾತಿ ಸರ್ಕಾರದ ಗಮನಕ್ಕೆ ತರದೇ ನೇಮಕಾತಿ ಮಾಡಿಕೊಂಡಿರುವ ಬಗ್ಗೆ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ನಗರದ ಜಿ.ಪಂ ಸಭಾಂಗಣದಲ್ಲಿ ಶನಿವಾರ ಕೋವಿಡ್‌ ಸ್ಥಿತಿಗತಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಕೋವಿಡ್‌ ಸಂಕಷ್ಟದ ಸಮಯದಲ್ಲಿ ಗ್ರೂಪ್‌ ಡಿ, ಸ್ವತ್ಛತಾ ಕಾರ್ಮಿಕರು, ಡಾಟಾ ಎಂಟ್ರಿ ಆಪರೇಟರ್‌ ಹುದ್ದೆಗಳನ್ನು ಹೊರಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲಾಗಿದ್ದು, ನಾಲ್ಕೈದು ತಿಂಗಳಿನಿಂದ ಈ ಸಿಬ್ಬಂದಿ ವೇತನ ಬಾಕಿ ಇದೆ. ಜತೆಗೆ ಅಕ್ರಮ ನೇಮಕಾತಿ ನಡೆದಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಶಾಸಕರಾದ ಈಶ್ವರ ಖಂಡ್ರೆ, ರಹೀಮ್‌ ಖಾನ್‌ ಅವರು ಬ್ರಿಮ್ಸ್‌ನಲ್ಲಿ ಹೊರಗುತ್ತಿಗೆ ಮೇಲೆ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ವೇತನ ನೀಡಿಲ್ಲ. ಅಲ್ಲದೇ ಅಕ್ರಮವಾಗಿ ನೇಮಕಾತಿ ಕುರಿತು ವಿಷಯ ಪ್ರಸ್ತಾಪಿಸಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಅಧಿ ಕಾರಿಗಳಿಂದ ಮಾಹಿತಿ ಪಡೆದರು.

ನೇಮಕಾತಿ ಮತ್ತು ವೇತನ ವಿಳಂಬ ಕುರಿತು ಸಮಸ್ಯೆ ಇದ್ದು, ಬೆಂಗಳೂರಿಗೆ ತೆರಳಿ ಸಂಬಂಧಿಸಿದ ಸಚಿವರು, ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿ ಪಡೆಯುವೆ. ಶೀಘ್ರದಲ್ಲಿ ಹೊರಗುತ್ತಿಗೆ ಸಿಬ್ಬಂದಿಗೆ ಬಾಕಿ ವೇತನ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ಕುರಿತು ಚರ್ಚಿಸಲಾಯಿತು. ಈ ಸಂಬಂಧ ಶಾಸಕ ಖಂಡ್ರೆ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ ರಾಮಚಂದ್ರನ್‌, ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ 181 ಬಿಪಿಎಲ್‌, 182 ಎಪಿಎಲ್‌ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ. ಇನ್ನೂಳಿದವರಿಗೆ ಮಾ.15ರೊಳಗಾಗಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಶರಣು ಸಲಗರ, ವಿಧಾನ ಪರಿಷತ್‌ ಸದಸ್ಯರಾದ ಡಾ| ಚಂದ್ರಶೇಖರ ಪಾಟೀಲ್‌, ಅರವಿಂದಕುಮಾರ ಅರಳಿ, ಕೆಎಸ್‌ಐಐಡಿಸಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ಜಿಪಂ ಸಿಇಒ ಜಹೀರಾ ನಸೀಮ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಿಶೋರ ಬಾಬು ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420