ಹೈದರಾಬಾದ್ ಕರ್ನಾಟಕ

ಮಾಧ್ಯಮಗಳು ಜನರ ಧ್ವನಿಯಾಗಿ ಕೆಲಸ ಮಾಡಲಿ: ಮರಿಯಪ್ಪ ಹಳ್ಳಿ

ಶಹಾಬಾದ: ಮಾಧ್ಯಮಗಳು ಇಂದು ಜನರ ಧ್ವನಿಯಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು.

ಅವರು ರವಿವಾರ ನಗರದ ಲಕ್ಷ್ಮಿ ಗಂಜ್‌ನಲ್ಲಿ ಆಯೋಜಿಸಲಾದ ಮಾಸ್ ಮೀಡಿಯಾ ನೆಟವರ್ಕ ಫೌಂಡೇಶನ ವತಿಯಿಂದ ಆಯೋಜಿಸಲಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜಮುಖಿ, ಜನಮುಖಿಯಾಗಿ ಜನರ ಧ್ವನಿಯನ್ನು ಸರ್ಕಾರಕ್ಕೆ ತಿಳಿಸುವ ಮೂಲಕ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ಮಾಧ್ಯಮ ರಂಗ ಮಾಡುತ್ತಿತ್ತು.ಆದರೆ ಜನರ ಧ್ವನಿಯಾಗಿ ಕೆಲಸ ಮಾಡುವ ಮಾಧ್ಯಮಗಳು ಇಂದು ಎಲ್ಲೋ ಸಮಾಜ ಮುಖಿಯಾಗಿರುವ ವರದಿಗಳನ್ನು ಮರೆಮಾಚುವ ಕೆಲಸ ಮಾಡುತ್ತಿರುವುದು ಬೇಸರ ತರುತ್ತಿದೆ ಎಂದರು.

ಕೆಲವು ವರ್ಷಗಳಿಂದ ಮಾಧ್ಯಮ ಬಂಡವಾಳಶಾಹಿ ಹಾಗೂ ರಾಜಕೀಯ ಮುಖಂಡ ದಾಳವಾಗಿ ಕೆಲಸ ಮಾಡುತ್ತಿವೆ.ಒಂದೊಂದು ಮಾಧ್ಯಮದವರು ಒಂದೊಂದು ಪಕ್ಷಕ್ಕೆ ಅಂಟಿಕೊಂಡು ಜನರ ಧ್ವನಿಯನ್ನು ಅಡಗಿಸುವ ಕೆಲಸ ಮಾಡಲು ಹೊರಟಿರುವುದು ಮಾತ್ರ ದುರಂದ ಎಂದರು. ಸಮಾಜಮುಖಿಯಾಗಿ, ಪ್ರಾಮಾಣಿಕ ಹಾಗೂ ನಿಷ್ಪಕ್ಷಪಾತವಾಗಿ ಕೆಲಸ ಮಾಡುವ ಹಂಬಲದಿಂದ ಹುಟ್ಟಿಕೊಳ್ಳುತ್ತಿರುವ ಮಾಸ್ ಮೀಡಿಯಾ ನೇಟವರ್ಕ ಆರಂಭವಾಗಲಿ.ಜನರ ಧ್ವನಿಯಾಗಿ ಕೆಲಸ ಮಾಡಲಿ ಎಂದು ಆಶಿಸಿದರು.

ಮಾಸ್ ಮೀಡಿಯಾ ನೆಟವರ್ಕನ ಅಧಿಕಾರಿ ಬಾಲಾಜಿ ಕುಂಬಾರ ಮಾತನಾಡಿ, ಪ್ರಜಾಪ್ರಭುತ್ವ ಕಾವಲು ನಾಯಿ ಎಂದು ಕರೆಯಿಸಿಕೊಳ್ಳುವ ಮಾಧ್ಯಮ ಇಂದು ಸಾಕು ನಾಯಿಯಾಗಿ ಕೆಲಸ ಮಾಡುವ ಮೂಲಕ ತನ್ನ ಬದ್ಧತೆ ಹಾಗೂ ಘನತೆಯನ್ನು ಕಳೆದುಕೊಳ್ಳುತ್ತಿದೆ.ಶ್ರಮಿಕರ, ಕಾರ್ಮಿಕರ, ಹೋರಾಟಗಾರರ ಹಾಗೂ ಸಾರ್ವಜನಿಕರ ಧ್ವನಿಯಾಗಿ ಕೆಲಸ ಮಾಡದೇ, ಪಕ್ಷದ ಹಾಗೂ ರಾಜಕೀಯ ಮುಖಂಡರ ಪರವಾಗಿ ಕಾರ್ಯನಿರ್ವಹಿಸುತ್ತಿದೆ.

ಆದ್ದರಿಂದ ಪರ್ಯಾಯವಾಗಿ ದೇಶದಲ್ಲಿಯೇ ಬಹುದೊಡ್ಡ ನೆಟ್‌ವರ್ಕ ಮಾಧ್ಯಮವನ್ನು ಮಾರ್ಚ ೮ ಕ್ಕೆ ಉದ್ಘಾಟನೆಗೊಳ್ಳುತ್ತಿದೆ. ಸಾರ್ವಜನಿಕರು ನಿಮ್ಮ ಸುತ್ತಮುತ್ತಲಿನ ವರದಿಗಳನ್ನು ನೀವೇ ಕಳಿಸುವ ವ್ಯವಸ್ಥೆ ಮಾಡಲಾಗಿದೆ. ಇದು ಜನರ ಧ್ವನಿಯಾಗಿ ಕೆಲಸ ಮಾಡುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರನಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

ಎಐಎಮ್‌ಎಸ್‌ಎಸ್ ಜಿಲ್ಲಾಧ್ಯಕ್ಷೆ ಗುಂಡಮ್ಮ ಮಡಿವಾಳ,ದಸಂಸ ಜಿಲ್ಲಾ ಸಂಚಾಲಕ ಮರೆಪ್ಪ ಮೇತ್ರೆ ಮಾತನಾಡಿ, ಉಪನ್ಯಾಸಕ ಪೀರಪಾಶಾ, ಎಐಡಿವಾಯ್‌ಒ ಜಿಲ್ಲಾಧ್ಯಕ್ಷ ಜಗನ್ನಾಥ.ಎಸ್.ಹೆಚ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಗಿರಿಮಲ್ಲಪ್ಪ ವಳಸಂಗ ವೇದಿಕೆಯ ಮೇಲಿದ್ದರು.

ದ.ವಿ.ಒ ಸಂಚಾಲಕ ಪೂಜಪ್ಪ ಮೇತ್ರೆ, ಶರಣಗೌಡ ಪಾಟೀಲ, ಕುರುಬ ಸಮಾಜದ ಅಧ್ಯಕ್ಷ ಮಲ್ಕಣ್ಣ ಮುದ್ದಾ, ಶಾಂತಪ್ಪ ಹಡಪದ, ಮಲ್ಲಣ್ಣ ಮರತೂರ, ನರಸಿಂಹಲೂ ರಾಯಚೂರಕರ್,ಬಸವರಾಜ ಮಯೂರ, ಭರತ್ ಧನ್ನಾ,ಮಲ್ಲಣ್ಣ ಮಸ್ಕಿ, ರಾಘವೇಂದ್ರ ಗುಡೂರ,ಮಲ್ಲೇಶಿ ಭಜಂತ್ರಿ, ಮಲ್ಲಣ್ಣ ಕಾರೊಳ್ಳಿ, ಈರಣ್ಣ ಕುರಿ,ರಾಮಣ್ಣ ಇಬ್ರಾಹಿಂಪೂರ, ಸಾಯಬಣ್ಣ ಗುಡುಬಾ, ಗೌತಮ ಬಿದನೂರ್,ಅರುಣಕುಮಾರ ಜಾಯಿ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago