ರಬಕವಿ ಬನಹಟ್ಟಿ ಬಂದ್ ಗೆ ಕರೆ

0
11

ರಬಕವಿ-ಬನಹಟ್ಟಿ: ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ್ದು ಖಂಡಿಸಿ ಇದೇ 31 ರಂದು ರಬಕವಿ ಬನಹಟ್ಟಿ ತಾಲ್ಲೂಕು ಸಂಪೂರ್ಣ ಬಂದ್ ಗೆ ಕರೆಯನ್ನು ನೀಡಲಾಗಿದೆ ಎಂದು ಮುಖಂಡರಾದ ಶಿವಲಿಂಗ ಗೊಂಬಿಗುಡ್ಡ ಮತ್ತು ರಾಜು ಸರಿಕರ್ ತಿಳಿಸಿದರು.

ಅವರು ಭಾನುವಾರ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ರಬಕವಿಯ ಹೊಸ ಬಸ್ ನಿಲ್ದಾಣದಿಂದ ಬನಹಟ್ಟಿಯ ಗಾಂಧಿ ಸರ್ಕಲ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುವುದು. ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲ ಅಂಗಡಿ ಮುಗ್ಗಟ್ಟಗಳನ್ನು ಬಂದ್ ಮಾಡಲಾಗುವುದು. ಅದೇ ರೀತಿಯಾಗಿ ಸಂಚಾರವನ್ನು ಕೂಡಾ ಬಂದ್ ಮಾಡಲಾಗುವುದು ಎಂದು ಮುಖಂಡರು ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಕರವೇ, ಅಟೊ ಚಾಲಕರ ಸಂಘ, ಅಲ್ಪ ಸಂಖ್ಯಾತರ ಘಟಕ ಸೇರಿದಂತೆ ಅನೇಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿವೆ ಶಿವಲಿಂಗ ಗೊಂಬಿಗುಡ್ಡ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಭಾಕರ ಚಲಾವಾದಿ, ಸುನೀಲ ಹರಿಜನ, ಶಿವಾನಂದ ಕಾಂಬಳೆ ಮತ್ತು ಶ್ರೀಧರ ಕಿತ್ತೂರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here