ಕಲಬುರಗಿ; ದಕ್ಷಿಣದ ವಾರ್ಡ.ನಂ,೫೩ ರಲ್ಲಿ ಬರುವ ವಿವಿಧ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಅವರು ಹಲವು ಇಲಾಖೆಗಳ ಅಧಿಕಾರಿಗಳೊಂದಿಗೆ ವಾರ್ಡ ನಾಗರಿಕರಿಂದ ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಬಗ್ಗೆ ಹರಿಸುವ ನಿಟ್ಟಿನಲ್ಲಿ ಜನರಿಗೆ ತೊಂದರೆಯಾಗದಂತೆ ಸಮಸ್ಯೆಗಳನ್ನು ತ್ವರಿತವಾಗಿ ಬಗ್ಗೆ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಧರ್ಭದಲ್ಲಿ ಮುಖಂಡ ವಿಶ್ವನಾಥ ಸಾಲಿಮಠ, ಪಾಲಿಕೆ ಸದಸ್ಯ ಮಲ್ಲು ಉದನೂರ, ಅರವಿಂದ ನಾಯಕ, ಸಾಗರ ಪಾಟೀಲ, ಜಗದೀಶ ಹರಿಶರೆಡ್ಡಿ, ಪಾಲಿಕೆ ಅಧಿಕಾರಿಗಳಾದ ಆರ್.ಪಿ.ಜಾಧವ, ಇ.ಇ.ಶಂಕರ್ ಗೌಡ ಬಡಾವಣೆ ಮುಖಂಡರು, ಬಿಜೆಪಿ ಕಾರ್ಯಕರ್ತರು ಇದ್ದರು.