ಬಿಸಿ ಬಿಸಿ ಸುದ್ದಿ

ಸುಳ್ಳು ವಿಡಿಯೋ ಚಿತ್ರಿಸಿ ಬ್ಲಾಕ್ ಮೇಲ್ ಗೆ ಯತ್ನದ ಆರೋಪ: ಕ್ರಮಕ್ಕೆ ಆಗ್ರಹ

ಕಲಬುರಗಿ: ಕುಟುಂಬದ ಜಗಳವನ್ನು ನಕಲಿ ವಿಡಿಯೋ ಚಿತ್ರಿಕರಿಸಿ ದೊಡ್ಡಮಟ್ಟದ ಹಣದ ಆಮೀಷವೊಡ್ಡಿ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿರುವ ಖಾಸಗಿ ಸಾಮಾಜಿಕ ಮಾಧ್ಯಮದ ಚಾಲನ್‌ವೊಂದರ ಸಂಚಾಲಕರಾದ ಸೇರಿ ಇತರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನುಜಹತ್ ಸುಲ್ತಾನ್ ಅವರು ಆಗ್ರಹಿಸಿದ್ದಾರೆ

ನಗರದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಫೇಸ್‌ಬುಕ್ ಹಾಗೂ ಯೂಟ್ಯೂಬ್ ಚಾನೆಲ್‌ಗಳು ಸುಳ್ಳು ವಿಡಿಯೋ ಸೃಷ್ಟಿಸಿ ಹಣ ಲಪಟಾಯಿಸುವಂತಹ ಕೃತ್ಯಗಳು ಮಾಡುತ್ತಿದ್ದಾರೆ. ಈ ಕುರಿತು ಮಹಿಳಾ ಪೊಲೀಸ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ನೀಡಿದ್ದೇನೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಮಾನ್ಯತೆ ಪಡೆಯದ ಅವರುಗಳ ಚಾನೆಲ್ ಹಾಗೂ ಪೇಜ್‌ಗಳನ್ನು ರದ್ದುಪಡಿಸಬೇಕೆಂದು ಪಟ್ಟು ಹಿಡಿದು ಒತ್ತಾಯಿಸಿದರು.

ಈ ಕುರಿತು ನನ್ನ ಮೇಲೆ ವೈಯಕ್ತಿಕ ಹರಣ ಮಾಡಿದ್ದರಿಂದ ಅವರ ವಿರುದ್ಧ ಜನೆವರಿ ೮ ರಂದು ನಗರ ಮಹಿಳಾ ಪೊಲೀಸ ಠಾಣೆಯಲ್ಲಿ ಪ್ರಮುಖ ಆರೋಪಿಗಳಾದ ವಸೀಂ ಸಲೀಂ ಗೌಂಡಿ( ಗುಲಬರ್ಗಾ ಹೆಡ್‌ಲೈನ್ಸ್), ಮೋಸಿನ್ ಅಹ್ಮದ್ (ಗುಲಬರ್ಗಾ ೨೪), ಮೋಸೀನ್ ಶಾಬಾದ (ಗುಲಬರ್ಗಾ ಟೈಮ್ಸ್) ಹಾಗೂ ರಾಪಿಯಾ ಶೀರಿನ್ ಖಾನ ( ಗುಲಬರ್ಗಾ ನ್ಯೂಸ್) ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕ್ರಮ ಕೈಗೊಂಡಿಲ್ಲ, ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಬೇಕು, ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ಸಾಮಾಜಿಕ ಮಾಧ್ಯಮ ಚಾನೆಲ್ ಹೊಂದಿದ ನಾಲ್ವರೂ ಸಹ ನಿತ್ಯ ಕಲಬುರಗಿ ನಗರದಲ್ಲಿ ಜನಸಾಮಾನ್ಯರ ವಿಡಿಯೋಗಳನ್ನು ಸೃಷ್ಟಿಸಿ ನ್ಯಾಯ ಕೊಡಿಸುವ ಆಮೀಷವೊಡ್ಡಿ ಅವರಿಂದ ಸಾವಿರಾರು ರೂಪಾಯಿಗಳು ದೋಚುತ್ತಿದ್ದಾರೆ. ಈ ಪ್ರಕರಣ ಕುರಿತು ಗಂಭೀರ ಪರಿಗಣಿಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ನುಜಹತ್ ಸುಲ್ತಾನ್ ಅವರು ಆಗ್ರಹಿಸಿದರು.

ಈ ಕುರಿತು ನಗರ ಮಹಿಳಾ ಪೊಲೀಸ್ ಠಾಣೆಗೆ ಸಂಪರ್ಕಿಸಿದಾಗ ಪ್ರಕರಣ ದಾಖಲಿಸಿ, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

1 hour ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

1 hour ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

3 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

4 hours ago