ಕಲಬುರಗಿ; ಭಾರತದ ಸಂವಿಧಾನದ ರಚನಾ ಸ್ವರೂಪ ಮತ್ತು ಅದರ ಉದ್ದೇಶದ ಬಗೆಗೆ ಸರಿಯಾದ ಜ್ಞಾನ ಹೊಂದಿಲ್ಲದ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರು ಕೇವಲ ತನ್ನ ಸುತ್ತ ವ್ಯಕ್ತಿ ಕೇಂದ್ರಿತವಾದ ಚರ್ಚೆಯೊಂದು ನಡೆಯಲಿ ಎಂಬ ಕಾರಣಕ್ಕೆ ಸಂವಿಧಾನವನ್ನು ಬದಲಿಸುವ ಮಾತನ್ನು ಆಡಿರುವುದು ಅವರ ಬೇಜವಾಬ್ದಾರಿ ತನದ ಸಂಕೇತವಾಗಿದೆ ಎಂದು ಕಲಬುರಗಿ ಗ್ರಾಮೀಣ ಯುವ ಕಾಂಗ್ರೆಸ್ ಸಂಯೋಜಕರಾದ ಶಿವಾನಂದ ಆರ್ ಕಿಳ್ಳಿ ಸರಡಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಬಾ ಸಾಹೇಬರು “ನನ್ನ ಸಂವಿಧಾನ ಉತ್ತಮವಾಗಿದ್ದರೂ ಸಹ ಅದು ಕೆಟ್ಟ ಜನರ ಕೈಗೆ ಸಿಕ್ಕರೆ, ಅದರ ಉದ್ದೇಶ ಫಲಿಸುವುದಿಲ್ಲ” ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ನೋಡಿದಾಗ ಚಂದ್ರಶೇಖರ್ ರಾವ್ ಅವರು ಮೊದಲು ಸಂವಿಧಾನವನ್ನು ಅರ್ಥಮಾಡಿಕೊಂಡು ಮಾತನಾಡುವುದನ್ನು ಕಲಿಯಬೇಕು.
ಸಂವಿಧಾನವೇ ಅರ್ಥವಾಗದೇ ಸಂವಿಧಾನವನ್ನು ಬದಲಿಸುತ್ತೇವೆ ಎಂಬುದು ಮೊದಲನೇ ಮೂರ್ಖತನವಾದರೆ, ಸಂವಿಧಾನವನ್ನು ಹೊಸದಾಗಿ ಬರೆದ ಮೇಲೆ ಎಲ್ಲವೂ ಎಲ್ಲರೂ ಸರಿಯಾಗಿ ನಡೆಯುತ್ತಾರೆ ಎಂಬುದು ಇನ್ನೊಂದು ಮೂರ್ಖತನ. ಹೀಗಾಗಿ ಕೇವಲ ಒಣ ಪ್ರಚಾರಕ್ಕಾಗಿ ತಮ್ಮ ಮೂಗಿನ ನೇರಕ್ಕೆ ಮಾತನಾಡುತ್ತಿರುವ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಅತಿ ಬುದ್ಧಿವಂತಿಕೆ ತೋರದೇ, ಮೊದಲು ಸಂವಿಧಾನವನ್ನು ತಿಳಿದುಕೊಳ್ಳಲಿ ಮತ್ತು ಸಂವಿಧಾನವನ್ನೇ ಅರಿಯದೇ ೫೦ ವರ್ಷ ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಈಗ ಸಂವಿಧಾನವನ್ನು ಬದಲಿಸಬೇಕು ಎಂದು ಬೇಜವಾಬ್ದಾರಿಯಿಂದ ಮಾತನಾಡಿದ್ದಕ್ಕೆ ದೇಶದ ಜನರ ಕ್ಷಮೆಯಾಚಿಸಲಿ ಎಂದು ಕಿಳ್ಳಿ ಅವರು ಪ್ರಕಟಣೆ ಮೂಲಕ ಆಗ್ರಹಿಸಿದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…