ಮಜೂರಿ ಹೆಚ್ಚಳಕ್ಕಾಗಿ ನೇಕಾರರಿಂದ ಬ್ರಹತ್ ಪ್ರತಿಭಟನಾ ಮೆರವಣಿಗೆ

ರಬಕವಿ-ಬನಹಟ್ಟಿ : ಕಳೆದ ಹಲವಾರು ದಿನಗಳಿಂದ ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ನಡೆಸುತ್ತಿರುವ ಜೋಡಣಿದಾರ ನೇಕಾರರು ಗುರುವಾರ ಬನಹಟ್ಟಿಯ ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ನೂರಾರೂ ನೇಕಾರರು ಘೋಷಣೆ ಕೂಗುತ್ತಾ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಳೆದ ಎಂಟು ದಿನಗಳಿಂದ ಮಗ್ಗಗಳನ್ನು ಬಂದ್ ಮಾಡಿಕೊಂಡಿದ್ದರಿಂದ ನೇಕಾರರ ಆರ್ಥಿಕ ಪರಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಅದು ಇನಷ್ಟು ಹದಗೆಡುವ ಮುಂಚೆ ತಾವು ಮಧ್ಯ ಪ್ರವೇಶಿಸಿ ರಬಕವಿಯಲ್ಲಿ ಹೆಚ್ಚಳವಾದಂತೆ ಇಲ್ಲಿ ಬನಹಟ್ಟಿಯಲ್ಲಿಯೂ ಹೆಚ್ಚಳ ಮಾಡಬೇಕೆಂದು ಮಾಲಿಕರಲ್ಲಿ ತಿಳಿಸಬೇಕು ಇಲ್ಲವಾದಲ್ಲಿ ನಮ್ಮ ಕುಟುಂಬಗಳು ಬೀದಿಗೆ ಬಿದ್ದು ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಕಾರಣ ಈ ಕೂಡಲೇ ಜೋಡಣಿದಾರ ನೇಕಾರರ ಮಜೂರಿ ಹೆಚ್ಚಳ ಬಿಕ್ಕಟ್ಟನ್ನು ಬಗೆಹರಿಸಲು ಮಧ್ಯ ಪ್ರವೇಶಿಸಬೇಕು ಎಂದು ತಹಶೀಲ್ದಾರ ಸಂಜಯ ಇಂಗಳೆ ಅವರಿಗೆ ಮುಖಂಡರು ಮನವಿ ಅರ್ಪಿಸಿದರು.

ಈ ವೇಳೆ ವಿಷಯ ಅರಿತ ಶಾಸಕ ಸಿದ್ದು ಸವದಿ ಸ್ಥಳಕ್ಕೆ ಆಗಮಿಸಿ ನಾಳೆ ಶುಕ್ರವಾರ ಮುಂಜಾನೆ ೮ ಗಂಟೆಗೆ ಮಾಲೀಕರ ಮುಖಂಡರನ್ನು ಕರೆಯಿಸಿ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಮಾಡುವ ಬರವಸೆ ನೀಡಿದರು.

ಸಂದರ್ಭದಲ್ಲಿ ಕುಬೇರ ಸಾರವಾಡ, ಶಿವಲಿಂಗ ಟಿರಕಿ, ಪರಮಾನಂದ ಬಾವಿಕಟ್ಟಿ, ಸುರೇಶ ಮಠದ, ಆನಂದ ಜಗದಾಳ, ಸಂಗಪ್ಪ ಉದಗಟ್ಟಿ, ಸಂತೋಷ ಮಾಚಕನೂರ ಸೇರಿದಂತೆ ನೂರಾರೂ ಜೋಡಣಿದಾರ ನೇಕಾರರು ಭಾಗವಹಿಸಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420