ಅಲ್ಲಮ ಪ್ರಭು ಆಧ್ಯಾತ್ಮ ಜಗತ್ತಿನ ವಿಸ್ಮಯ: ಪೀರಪಾಶಾ

ಶಹಾಬಾದ:ಅಲ್ಲಮ ಪ್ರಭು ಆಧ್ಯಾತ್ಮ ಜಗತ್ತಿನ ವಿಸ್ಮಯ.ಸಾಧನೆಯ ದೃಷ್ಟಿಯಿಂದ ದೇಶ, ಕಾಲಗಳನ್ನು ಮೀರಿ ವಿಶ್ವದ ಮಹಾನ್ ವಿಭೂತಿಗಳ ಸಾಲಿನಲ್ಲಿ ನಿಲ್ಲಬಲ್ಲ ಮಹಾನುಭವಿ ಎಂದು ಕೂಡಲ ಸಂಗಮ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಪೀರಪಾಶಾ ಹೇಳಿದರು.

ಅವರು ರವಿವಾರ ಭಂಕೂರ ಗ್ರಾಮದ ಶಾಂತನಗರದ ಬಸವ ಸಮಿತಿಯಲ್ಲಿ ಆಯೋಜಿಸಲಾದ ಅಲ್ಲಮಪ್ರಭು ಜಯಂತಿ ಹಾಗೂ ಯುಗಾದಿ ಹಬ್ಬದ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.

ಬಸವಣ್ಣನವರದು ಭಕ್ತಿಮಾರ್ಗ.ಅಲ್ಲಮನದು ಅರಿವಿನ ಮಾರ್ಗ.ಅನುಭಾವದರಿವಿನಲ್ಲಿ ಲೋಕಕಲ್ಯಾಣವನ್ನು ಕಂಡವರು ಅಲ್ಲಮ ಪ್ರಭುದೇವರು.ತಮ್ಮ ಆತ್ಮ ಉದ್ಧಾರದ ಜತೆಗೆ ವ್ಯಕ್ತಿ ಶುದ್ಧಿಯ ಮೂಲಕ ಸಮಾಜದ ಶುದ್ಧಿಗೆ ತೊಡಗಿದ ಅವರು ತನು,ಮನ ಶಿದ್ಧಿಗೆ ಆದ್ಯತೆ ನೀಡಿದವರು.ಸರ್ವಸಮಾನತೆಯ, ಸ್ವಾವಲಂಬನೆಯ ಬದುಕಿಗೆ ಸತ್ಯ ಶುದ್ಧ ಕಾಯಕ ಮತ್ತು ದಾಸೋಹ ಜಾರಿಗೊಳಿಸಿದರು. ಬಸವ ಧರ್ಮ ಅಪ್ಪಿಕೊಳ್ಳುವ ಹಾಗೂ ಒಪ್ಪಿಕೊಳ್ಳುವ ಧರ್ಮವಾಗಿದ್ದು, ಅದರ ಸಾರವನ್ನು ನಾವೆಲ್ಲರೂ ಅನುಭವಿಸಿದ್ದೆ ಆದರೆ ಎಲ್ಲರೂ ಬದುಕಿನಲ್ಲಿ ಸಂತೋಷವನ್ನು ಕಾಣಬಹುದು ಎಂದರು.

ಶಿಕ್ಷಕ ಮಲ್ಲಿನಾಥ ಪಾಟೀಲ ಮಾತನಾಡಿ, ಅಲ್ಲಮ ಪ್ರಭುವಿನ ವಚನಗಳು ಅನುಭಾವದ ರತ್ನ ಗಣಿಗಳು.ಮೊಗೆದಷ್ಟು ಆಳ, ಆಳಕ್ಕೆ ಆಳ. ವಿಸ್ತಾರಕ್ಕೆ ವಿಸ್ತಾರ. ಎತ್ತರಕ್ಕೆ ಎತ್ತರ.ಮಾತಿಗೆ ಮೀರಿದ ಅನುಭೂತಿ ಅವರ ವಚನಗಳಲ್ಲಿ ಕಾಣಬಹುದು.ಅಲ್ಲಮಪ್ರಭುವಿನ ಜ್ಞಾನ ಬಹುದೊಡ್ಡದು.ಆತನ ಅನುಭಾವದ ಎತ್ತರಕ್ಕೆ ಏರಿದವರು ಬಹಳ ವಿರಳ. ಶರಣ ದರ್ಶನದ ಪ್ರಕಾರ ಮನುಷ್ಯ ಸಾಧಿಸಬಹುದಾದ ಆಧ್ಯಾತ್ಮಿಕ ಜಗತ್ತಿನ ಅತ್ಯಂತ ಉನ್ನತಿ ಸಾಧಿಸಿದ ಮಹಾಂತ.ಅಲ್ಲಮ ಪ್ರಭುದೇವರ ಆಧ್ಯಾತ್ಮಿಕ ಜ್ಞಾನ,ಅನುಭಾವ, ವೈರಾಗ್ಯ ಜೀವನ ಮನುಕುಲಕ್ಕೆ ಆದರ್ಶವಾಗಿವೆ ಎಂದು ಹೇಳಿದರು.

ಬಸವ ಸಮಿತಿ ಅಧ್ಯಕ್ಷ ಅಮೃತ ಮಾನಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುಗಾದಿಯೆಂದರೆ ಹೊಸವ?ದ ಆರಂಭದ.ಇಂದಿನಿಂದ ವಸಂತ ಮಾಸ ಪ್ರಾರಂಭವಾಗುತ್ತದೆ. ಬೇವು-ಬೆಲ್ಲ ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಗಿಡ ಮರಗಳು ಹೊಸ ಚಿಗುರು ಪಡೆಯಲು ಪ್ರಾರಂಭವಾಗುತ್ತದೆ. ಈ ಹೊಸ ವ?ವನ್ನು ಬೇವು-ಬೆಲ್ಲ ತಿನ್ನುವುದರ ಮೂಲಕ ಜೀವನದಲ್ಲಿ ಸಿಹಿ-ಕಹಿ ಎರಡೂ ಸಮಾನವಾಗಿರುವುದರ ಸಂಕೇತವಾಗಿ ಸ್ವೀಕರಿಸಬೇಕೆಂಬ ಸಂದೇಶವೇ ಈ ಯುಗಾದಿ ಎಂದರು. ಉಪನ್ಯಾಸಕ ಡಾ.ಈರಣ್ಣ ಇಟಗಿ ವೇದಿಕೆಯ ಮೇಲಿದ್ದರು.

ರೇವಣಸಿದ್ದಪ್ಪ ಮುಸ್ತಾರಿ ನಿರೂಪಿಸಿ, ವಂದಿಸಿದರು. ಗುರಲಿಂಗಪ್ಪ ಪಾಟೀಲ ಸ್ವಾಗತಿಸಿದರು. ಬಸವ ಸಮಿತಿ ಪದಾಧಿಕಾರಿಗಳಾದ ಶಿವಶರಣಪ್ಪ ಜಟ್ಟೂರ್, ಚಂದ್ರಕಾಂತ ಅಲಮಾ, ಶಾಂತಪ್ಪ ಬಸಪಟ್ಟಣ, ಹಣಮಂತರಾಯ ದೇಸಾಯಿ, ಲಕ್ಷ್ಮಣ ಬಾಲಗೊಂಡ, ಹೆಚ್.ವಾಯ್.ರಡ್ಡೇರ್,ಶಿವರಾಜ ಹಡಪದ, ಮಲ್ಲಿಕಾರ್ಜುನ ಘಾಲಿ, ಅಮರಪ್ಪ ಹೀರಾಳ, ಈರಣ್ಣ ಸುತಾರ,ದತ್ತಪ್ಪ ಕೋಟನೂರ್, ಮಲ್ಲಿಕಾರ್ಜುನ ಹಿರೆನೂರ್ ಇತರರು ಇದ್ದರು.\

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420