ಶಹಾಬಾದ: ತಾಲೂಕಾಡಳಿತ ಮತ್ತು ನಗರಸಭೆಯಿಂದ ಎಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜಯಂತಿ ಹಾಗೂ ಎಪ್ರಿಲ್ ೫ ರಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ ಅವರ ೧೧೫ನೇ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
ತಹಸೀಲ್ದಾರ ಸುರೇಶ ವರ್ಮಾ, ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ , ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಿವಿಧ ಸಂಘಟನೆಗಳ ಮುಖಂಡರು, ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
ದಸಂಸ ಮುಖಂಡ ಕೃಷ್ಣಪ್ಪ ಕರಣಿಕ್ ಮಾತನಾಡಿ,ಎರಡು ವರ್ಷದಿಂದ ಕೋವಿಡ್ ಇರುವ ಕಾರಣ ಜಯಂತಿ ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ.ಆದ್ದರಿಂದ ಈ ಬಾರಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಎಂದರು. ತಾಲೂಕಾಡಳಿತ ಮತ್ತು ನಗರಸಭೆಯಿಂದ ಆಚರಿಸಬೇಕೋ ಅಥವಾ ಸಮಾಜದಿಂದ ಜಯಂತಿಯನ್ನು ಆಚರಿಸಬೇಕೋ ಎಂದು ತಹಸೀಲ್ದಾರರು ಕೇಳಿದಕ್ಕೆ ಮುಖಂಡರು ಸಮಾಜದ ವತಿಯಿಂದಲೇ ಆಚರಿಸುತ್ತೆವೆ ಎಂದರು.
ನಂತರ ತಹಸೀಲ್ದಾರರು ಮಾತನಾಡಿ, ಎಪ್ರಿಲ್ ೧೪ ರಂದು ಅಂಬೇಡ್ಕರ್ ಅವರ ಮತ್ತು ಎಪ್ರಿಲ್ ೫ ರಂದು ಬಾಬು ಜಗಜೀವನರಾಮ ಅವರ ಜಯಂತಿಯನ್ನು ಎಂದಿನಂತೆ ಸರಕಾರಿ ಕಚೇರಿಗಳಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಮುಂದಿನ ದಿನಾಂಕ ನಿಗದಿಪಡಿಸಿ ಸಮಾಜದಿಂದ ಜಯಂತಿಗಳನ್ನು ಅದ್ದೂರಿಯಾಗಿ ಆಚರಿಸಲು ತಿಳಿಸಿದರು.
ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮಾತನಾಡಿ, ಯಾವುದೇ ಜಯಂತಿಗಳಾಗಲಿ ಎಲ್ಲಾ ಸಮಾಜದವರನ್ನು ಕರೆದು ಸಭೆ ನಡೆಸಬೇಕು.ಅಲ್ಲದೇ ಎಲ್ಲಾ ಜಯಂತಿಗಳಲ್ಲಿ ಎಲ್ಲಾ ಸಮಾಜದವರು ಭಾಗವಹಿಸುವಂತಾದರೆ ಜಯಂತಿಗೆ ಅರ್ಥ ಬರುತ್ತದೆ ಎಂದು ಹೇಳಿದರು.ಇದಕ್ಕೆ ಎಲ್ಲರೂ ಸಮ್ಮತಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶ ಕಂಬಾನೂರ, ರಾಜೇಶ ಯನಗುಂಟಿಕರ, ನಾಗರಾಜ ಕರಣಿಕ್,ಪ್ರವೀಣ ರಾಜನ್,ಡಿ.ಡಿ.ಓಣಿ, ನಾಗಪ್ಪ ಬೆಳಮಗಿ, ಸ್ನೇಹಲ್ ಜಾಯಿ, ಬಸವರಾಜ ಮಯೂರ,ನರಸಿಂಹಲೂ ರಾಯಚೂರಕರ್,ಮಹಾದೇವ ತರನಳ್ಳಿ, ಪೂಜಪ್ಪ ಮೇತ್ರೆ, ಅಶೋಕ ತುತಾರೆ,ಸುಭಾಷ ಸಾಕ್ರೆ,ಸಂತೋಷ ಹುಲಿ, ಮಲ್ಲಣ್ಣ ಮಸ್ಕಿ, ಪಿಎಸ್ಐ ಸುವರ್ಣಾ ಮಲಶೆಟ್ಟಿ ಸೇರಿದಂತೆ ಸಮಾಜದ ಮುಖಂಡರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…