ಕಲಬುರಗಿ: ಜಿಲ್ಲಾ ಪತ್ರಿಕಾ ಭವನದ ನಿರ್ವಹಣೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಡಲಿದ್ದು, ಸಂಘ-ಸಂಸ್ಥೆಗಳು/ಪದಾಧಿಕಾರಿಗಳು ಹಾಗೂ ಇನ್ನಿತರರು ಎಂದಿನಂತೆ, ನಿಗದಿತ ಶುಲ್ಕ ಪಾವತಿಸಿ ಪತ್ರಿಕಾಗೋಷ್ಠಿಗಳ ಸಮಯವನ್ನು ಮೊದಲೇ ಕಾಯ್ದಿರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪತ್ರಿಕಾ ಭವನ ಸಮಿತಿಯ ಸದಸ್ಯರೂ ಆಗಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕÀ ಸಿದ್ದೇಶ್ವರಪ್ಪ.ಜಿ.ಬಿ ಅವರು ತಿಳಿಸಿದ್ದಾರೆ.
ಪ್ರತಿ ಪತ್ರಿಕಾಗೋಷ್ಠಿಗೆ 1,000 ರೂಪಾಯಿ ನಿಗದಿ ಪಡಿಸಲಾಗಿದ್ದು, ಕಚೇರಿಗೆ ಒಂದು ದಿನ ಮುಂಚಿತವಾಗಿ ಬಂದು ಶುಲ್ಕ ಸಂದಾಯ ಮಾಡಿ ಪತ್ರಿಕಾಗೋಷ್ಠಿಗಳ ಸಮಯ ಬುಕ್ ಮಾಡಿಕೊಳ್ಳಬಹುದು. ಪತ್ರಿಕಾಗೋಷ್ಠಿಗಳ ಮಾಹಿತಿ ಹಾಗೂ ಕಾಯ್ದಿರಿಸುವಿಕೆಗಾಗಿ ಈ ಕಚೇರಿ ಸಿನಿ ಚಾಲಕರಾದ ಶ್ರೀ ಉಮಾಶಂಕರ್ ಮೊಬೈಲ್ ಸಂಖ್ಯೆ- 70195 73201 ಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಈ ಮೊದಲು ಪತ್ರಿಕಾ ಭವನ ನಿರ್ವಹಣೆ ಮಾಡುತ್ತಿದ್ದ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಲಬುರಗಿ ಜಿಲ್ಲಾ ಘಟಕ ಸದ್ಯ ಅಸ್ತಿತ್ವದಲ್ಲಿಲ್ಲ. ಹಾಗಾಗಿ ಜಿಲ್ಲಾ ಪತ್ರಿಕಾ ಭವನ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಯಶವಂತ್.ವಿ. ಗುರುಕರ್ ಅವರ ನಿರ್ದೇಶನ ಮೇರೆಗೆ ನಿರ್ವಹಣೆಗೆ ಕ್ರಮಕೈಗೊಳ್ಳಲಾಗಿದೆ. ಪತ್ರಿಕಾಗೋಷ್ಠಿಯೊಂದಕ್ಕೆ ಒಂದು ಸಾವಿರ ರೂಪಾಯಿ ಮಾತ್ರ ಶುಲ್ಕ ಸಂಗ್ರಹಿಸಲಾಗುವುದು. ಯಾವುದೇ ಹೆಚ್ಚುವರಿ ಹಣ ಪಾವತಿಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾಗೋಷ್ಠಿಗೆ ಆಗಮಿಸುವ ಮಾಧ್ಯಮ ಪ್ರತಿನಿಧಿಗಳ ಔತಣ/ಸತ್ಕಾರಕ್ಕಾಗಿ ಪತ್ರಿಕಾಗೋಷ್ಠಿ ನಡೆಸುವ ಆಯಾ ಸಂಘ-ಸಂಸ್ಥೆಗಳ ಪ್ರತಿನಿಧಿಗಳೇ ನಿಗದಿ ಪಡಿಸಿದ ಸಮಯದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಚಹಾ/ಕಾಫಿ/ಉಪಹಾರ ವ್ಯವಸ್ಥೆ ಮಾಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…