ಪ್ಯಾಸೆಂಜರ್ ರೈಲುಗಳನ್ನು ಓಡಿಸುವಂತೆ ಕನ್ನಡ ಭೂಮಿ ಆಗ್ರಹ

ಕಲಬುರಗಿ:ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ವಿವಿಧ ಪ್ಯಾಸೆಂಜರ್ ರೈಲುಗಳನ್ನು ಬಂದ್ ಮಾಡಿದ್ದು ಮತ್ತೆ ಅವುಗಳು ಓಡಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ರೈಲ್ವೆ ಇಲಾಖೆಗೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಿನ ನಿತ್ಯ ದುಡಿಯುವ ವರ್ಗದ ಜನರು ಪ್ಯಾಸೆಂಜರ್ ರೈಲನ್ನೇ ಅವಲಂಭಿಸಿದ್ದಾರೆ.ಕಲಬುರಗಿ ಹಾಗೂ ಸೋಲಾಪುರದಿಂದ ಹೊರಡುವ ಪ್ಯಾಸೆಂಜರ್ ರೈಲುಗಳ ಮೂಲಕ ಸಾರ್ವಜನಿಕರು ಕೆಲಸಗಳಿಗೆ ತೆರಳುತ್ತಾರೆ.ರೈಲುಗಳು ಬಂದ್ ಆಗಿರುವುದರಿಂದ ಬಸ್ ಮೂಲಕ ಪ್ರಯಾಣಿಸುತ್ತಿದ್ದಾರೆ.ಆದರೆ ಬಸ್ ಟಿಕೆಟ್ ದರ ದುಬಾರಿಯಾಗಿದೆ.ಇದರಿಂದ ದಿನ ನಿತ್ಯ ಓಡಾಡುವ ಜನರಿಗೆ ತೊಂದರೆಯಾಗುತ್ತಿದೆ.

ಕಲಬುರಗಿಯಿಂದ ಹೈದರಾಬಾದಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ದಿನಾಲು ಸಾವಿರಾರು ಜನರು ವ್ಯಾಪಾರ ವಹಿವಾಟಿಗಾಗಿ ಓಡಾಡುತ್ತಿದ್ದರು.ಅಲ್ಲದೆ ಆಸ್ಪತ್ರೆಗೆ ಕಲಬುರಗಿಯಿಂದ ನೂರಾರು ರೋಗಿಗಳು ಸೋಲಾಪುರಕ್ಕೂ ಹೋಗುತ್ತಿದ್ದರು.ಆದರೆ ಕೊರೊನಾದಿಂದ ಈ ರೈಲುಗಳು ಸ್ಥಗಿತಗೊಂಡಿವೆ.ಹಿಗಾಗಿ ಜನರು ದುಬಾರಿ ಬೆಲೆ ತೆತ್ತು ಬಸ್ ನಲ್ಲಿ ಪ್ರಯಾಣಿಸುವುದು ಅನಿವಾರ್ಯವಾಗಿದೆ.

ಇನ್ನು ಸಮೀಪದ ಸೋಲಾಪುರ, ರಾಯಚೂರು,ವಾಡಿ,ಸೇಡಂಗಳಿಗೆ ಪ್ರಯಾಣ ಮಾಡಬೇಕಾದರೂ ಆನ್ ಲೈನ್ ಮುಂಗಡ ಬುಕ್ಕಿಂಗ್ ಮಾಡಿಸಬೇಕು.ಇದು ಬಡ ಜನರಿಗೆ ಸಂಕಷ್ಟ ಎದುರಾಗಿದೆ. ಮೊದಲಿನಂತೆ ರೈಲು ನಿಲ್ದಾಣದ ಟಿಕೆಟ್ ಕೌಂಟರ್ ನಲ್ಲಿ ಟಿಕೆಟ್ ನೀಡಬೇಕು.ಈಗಾಗಲೇ ಕೊರೊನಾ ಸಂಪೂರ್ಣ ಕಡಿಮೆಯಾಗಿದೆ. ಕೂಡಲೇ ಸ್ಥಗಿತ ಗೊಂಡಿರುವ ಪ್ಯಾಸೆಂಜರ್ ರೈಲುಗಳನ್ನು ಚಲಿಸುವಂತೆ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

17 mins ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

1 hour ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

1 hour ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

1 hour ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

1 hour ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420