ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯಿರುವ ವ್ಯಾಸರಾಯರ ವೃಂದಾವನಕ್ಕೆ ಧ್ವಂಸ ಕೃತ್ಯಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲ್ಲಾರಿ, ಡಿ ಮನೋಹರ, ಕೆ.ಕುಮ್ಮಟಕೇಶವ, ಬಿ ವಿಜಯಕುಮಾರ್ ಹಾಗೂ ಟಿ ಬಾಲರನಸಯ್ಯ ಬಂಧಿತ ಆರೋಪಿಗಳು. ಇ ಎಲ್ಲಾ ಆರೋಪಿಗಳು ಆಂಧ್ರಪ್ರದೇಶದ ಅನಂತಪುರ್ ಜಿಲ್ಲೆಯ ತಾಡಪತ್ರಿ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿತರಿಂದ ವ್ಯಾಸರಾಜರ ವೃಂದಾವನ ಧ್ವಂಸ ಕೃತ್ಯಕ್ಕೆ ಬಳಸಿದ ಹಾರೆ, ಗುದ್ದಲಿ, ಇನ್ನೋವಾ ಕಾರು ವಶಕ್ಕೆ ಪಡೆಯಲಾಗಿದೆ.
ನಿಧಿಗಾಗಿ ಕಳೆದ 17 ನೇ ದಿನಾಂಕದಂದು ರಾತ್ರಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನದಲ್ಲಿ ಧ್ವಂಸ ಮಾಡಲಾಗಿತ್ತು. ವ್ಯಾಸರಾಜದ ವೃಂದಾವನ ಕಿತ್ತು ಹಾಕಿದ್ದಕ್ಕೆ ರಾಜ್ಯಾದ್ಯಾಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ವಿವಿಧ ಮಠಾಧೀಶರು ಆರೋಪಿಗಳನ್ನ ಬಂಧಿಸುವಂತೆ ಅಗ್ರಹಿಸಿದ್ದರು. ಹಾಗೆಯೇ ಆರೋಪಿಗಳ ಬಂಧನಕ್ಕೆ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ ವಿಶೇಷ ತಂಡ ರಚನೆ ಮಾಡಿದ್ದು, ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲಬುರಗಿ; ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣದಲ್ಲಿ ಕುಟುಂಬದ ಅವಲಂಭಿತ ಸದಸ್ಯರಿಗೆ ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು ಎಂದು…
ಆಳಂದ; ಕಲ್ಯಾಣ ಕರ್ನಾಟಕ ಭಾಗದ ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತನ ಸದಸ್ಯ ಶಶೀಲ ನಮೋಶಿ ಅವರಿಗೆ ವಿಧಾನ ಪರಿಷತ ವಿರೋಧ…
ಕಲಬುರಗಿ : ಸಂಗೀತವು ಇಂದಿನ ದಿನ ಮಾನದಲ್ಲಿ ಮನುಷ್ಯನಿಗೆ ಶಾಂತಿ ಮತ್ತು ನೆಮ್ಮದಿ ನೀಡುತ್ತಿದೆ. ಸಂಗೀತದ ರಾಗಗಳಿಂದ ರೋಗ ನಿವಾರಣೆ…
ಕಲಬುರಗಿ; ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ “ಆಧುನಿಕ ಕನ್ನಡ ಕಾವ್ಯ ಧಾರೆಗಳು” ಎಂಬ…
ಬೆಂಗಳೂರು: 28 ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಬಿ.ವಿ.ಗೌಡರವರ ನಿಯೋಗವು ಇತ್ತೀಚೆಗೆ…
ಚಿಂಚೋಳಿ: ವಿದ್ಯಾರ್ಥಿಗಳ ಜೀವನವು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳವ ಮಹತ್ವದ ಘಟ್ಟವಾಗಿದೆ ಈ ಹಂತದಲ್ಲಿ ಮಾದಕವಸ್ತು ಮತ್ತು ಮದ್ಯಸೇವನೆ ಯಂತಹ ಚಟಗಳಿಗೆ…