ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಚನ್ನಬಸವಣ್ಣ, ಶಿವಮೂರ್ತಿ ಆಯ್ಕೆ

ಸೇಡಂ: ಪತ್ರಕರ್ತ ದಿ. ವೀರಭದ್ರ ಮಾಮನಿ ಸ್ಮರಣಾರ್ಥ ಕೊಡಮಾಡುವ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ  ಯಾದಗಿರಿ ವರದಿಗಾರ ಚನ್ನಬಸವಣ್ಣ ಮತ್ತು ರಾಯಚೂರು ವರದಿಗಾರ ಶಿವಮೂರ್ತಿ ಹಿರೇಮಠ ಭಾಜನರಾಗಿದ್ದಾರೆ.

ಬೊಮ್ನಳ್ಳಿ ಸುದ್ದಿ ಪ್ರತಿಷ್ಠಾನದ ವತಿಯಿಂದ ಜುಲೈ 23 ರಂದು ಮುಂಜಾನೆ 10-30ಕ್ಕೆ ಸೇಡಂನ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಮಹಾಂತೇಶ್ವರ ಹಿರೇಮಠದ ಡಾ. ತ್ರಿಮೂರ್ತಿ ಶಿವಾಚಾರ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಶಿವಯ್ಯಸ್ವಾಮಿ ಬಿಬ್ಬಳ್ಳಿ ವಹಿಸುವರು.
ದಶಮಾನೋತ್ಸವ ಸಂಭ್ರಮ: ಬೊಮ್ನಳ್ಳಿ ಸುದ್ದಿ ಪ್ರತಿಷ್ಠಾನ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ ಪತ್ರಿಕಾ ಸೇವೆಯನ್ನು ಪರಿಗಣಿಸಿ ಅನೇಕ ಪತ್ರಕರ್ತರಿಗೆ ಗೌರವ ಪ್ರಶಸ್ತಿ ನೀಡಲಾಗುತ್ತಿದ್ದು, ಹಿರಿಯ ಪತ್ರಕರ್ತರಾದ ಶ್ರೀನಿವಾಸ ಸಿರನೂರಕರ್, ಟಿ.ವಿ. ಶಿವಾನಂದನ್, ಸಂಪಾದಕ ಪಿ.ಎಂ. ಮಣ್ಣೂರ್, ಶ್ರೀಕಾಂತಾಚಾರ್ಯ ಮಣ್ಣುರ್, ಹಿರಿಯ ಪತ್ರಕರ್ತರಾದ ವಾದಿರಾಜ ವ್ಯಾಸಮುದ್ರ, ಸಂಪಾದಕ ಡಿ. ಶಿವಲಿಂಗಪ್ಪ, ವೀರಣ್ಣಗೌಡ ಯಡ್ಡಳ್ಳಿ, ಉರ್ದು ಪತ್ರಿಕೆ ಯೋದ್ದಿನ್ ಪಾಶಾ ಭಾಜನರಾಗಿದ್ದಾರೆ.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

2 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

3 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

4 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

4 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

4 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

4 hours ago