ಬಾಬು ಜಗಜೀವನರಾಮ, ಅಂಬೇಡ್ಕರ್ ದಲಿತ ಸಮುದಾಯದ ಎರಡು ಕಣ್ಣುಗಳು

0
39

ಶಹಾಬಾದ: ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ ಅವರು ದೇಶದ ದಲಿತ ಸಮುದಾಯದ ಎರಡು ಕಣ್ಣುಗಳಾಗಿ ಆ ವರ್ಗಗಳ ಅಭಿವೃದ್ಧಿಗೆ ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳು ಎಂದು ಶಹಾಬಾದ ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ಮಂಗಳವಾರ ನಗರಸಭೆಯಿಂದ ಆಯೋಜಿಸಲಾದ ಡಾ.ಬಾಬು ಜಗಜೀವನರಾಮ ಅವರ ಜಯಂತೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

Contact Your\'s Advertisement; 9902492681

ದೇಶದ ಆಹಾರ ಕೊರತೆ ನೀಗಿಸುವಲ್ಲಿ ರೈತರಿಗೆ ಹಸಿರು ಕ್ರಾಂತಿ ಮಂತ್ರ ಹೇಳಿಕೊಡುವ ಮೂಲಕ ದಲಿತ ಕುಟುಂಬದಲ್ಲಿ ಜನಿಸಿದ ಡಾ.ಬಾಬು ಜಗಜೀವನ ರಾಮ ದೇಶದ ಬಹು ದೊಡ್ಡ ಶಕ್ತಿಯಾಗಿದ್ದರು. ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ಬಾಬು ಜಗಜೀವನರಾಮ ಅವರು ಜಾರಿಗೆ ತಂದ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನಪರವಾಗಿವೆ . ಇಂತಹ ನಾಯಕರ ಜನ್ಮದಿನಾಚರಣೆ ನಡೆಸುವುದು ಸಾರ್ಥಕ ಎಂದು ಹೇಳಿದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹಾಗೂ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಮಾತನಾಡಿ, ಯಾವುದೇ ಪ್ರಭಾವವಿಲ್ಲದೇ ತಾವು ಪಡೆದ ಶಿಕ್ಷಣದಿಂದಲೇ ಮಾತ್ರ ಉನ್ನತ ಹುದ್ದೆಗಳನ್ನು ಪಡೆಯಬಹುದು ಎಂಬುದನ್ನು ತೋರಿಸಿಕೊಟ್ಟವರು ಜಗಜೀವನರಾಮ ಅವರು. ದಲಿತ ಸಮುದಾಯದ ಇಂದಿನ ಬದಲಾವಣೆಗೆ ಮತ್ತು ಸ್ಥಿತಿಗತಿಗಳ ಬದಲಾವಣೆಗೆ ಜಗಜೀವನರಾಮ ಕಾರಣರು. ಅನೇಕ ಹುದ್ದೆಗಳನ್ನು ಪಡೆದ ಇವರು ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ಎತ್ತಿ ಹಿಡಿದು ಸಂವಿಧಾನದಲ್ಲಿ ಸಾಮಾಜಿಕ ನ್ಯಾಯವನ್ನು ರೂಪಿಸಿದ ಕೀರ್ತಿ ಇವರಿಗೆ ಸಲ್ಲಬೇಕು.ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ಬಾಬು ಜಗಜೀವನ್‌ರಾಮ ಅವರು ದೇಶದ ಉಪಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನಪರವಾಗಿವೆ ಎಂದರು.

ನಗರಸಭೆಯ ಉಪಾಧ್ಯಕ್ಷೆ ಸಲೀಮಾಬೇಗಂ, ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಕಿರಣ ಕೋರೆ, ಶಿವರಾಜ ಕೋರೆ, ಶರಣು ಪಗಲಾಪೂರ, ರಾಜೇಶ ಯನಗುಂಟಿಕರ್, ಸಂತೋಷ ಹುಲಿ,ಕೃಷ್ಣಪ್ಪ ಕರಣಿಕ್, ವ್ಯವಸ್ಥಾಪಕ ಶರಣಗೌಡ ಪಾಟೀಲ, ಸುನೀಲಕುಮಾರ, ರಘುನಾಥ ನರಸಾಳೆ, ಅವಿನಾಶ ಕಂಬಾನೂರ, ಅಮರ ಕೋರೆ, ರವಿ ಬೆಳಮಗಿ, ನೈರ್ಮಲ್ಯ ನಿರೀಕ್ಷಕ ಶಿವರಾಜಕುಮಾರ ಸೇರಿದಂತೆ ಅನೇಕರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here