ಬಿಸಿ ಬಿಸಿ ಸುದ್ದಿ

ಸಂಶೋಧನೆಗಾಗಿ ವಿದೇಶ ಪ್ರಯಾಣ ಪ್ರವೃತ್ತಿ ತಡೆ: ಡಾ. ನಿಷ್ಠಿ

ಕಲಬುರಗಿ: ಭಾರತದ ದೇಶದ ಪ್ರಾಚೀನ ವಿಶ್ವವಿದ್ಯಾಲಯಗಳಾದ ನಳಂದ ಮತ್ತು ತಕ್ಷಶೀಲ ವಿಶ್ವವಿದ್ಯಾಲಯಗಳು ವಿದೇಶ ಸಂಶೋಧಕರಿಗೆ ಜ್ಞಾನದ ಮೂಲಗಳಾಗಿವೆ. ಯುವಕರು ಸಂಶೋಧನಾ ಚಟುವಟಿಕೆಗಳಿಗೋಸ್ಕರ ವಿದೇಶಕ್ಕೆ ಪ್ರಯಾಣ ಬೆಳೆಸುವ ಪ್ರವೃತ್ತಿಯನ್ನು ತಡೆಯುವದು ರಾಷ್ಟ್ರೀಯ ಶಿಕ್ಷಣ ನೀತಿ-೨೦೧೯ರ ಮೂಲಕ ಸಾಧ್ಯವಾಗುತ್ತದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ್ ಅಭಿಪ್ರಾಯಪಟ್ಟರು.

ನಗರದ ಶರಣಬಸವ ವಿಶ್ವವಿದ್ಯಾಲಯ ಆವರಣದ ದೊಡಪ್ಪ ಅಪ್ಪಾ ಸಭಾಮಟಪದಲ್ಲಿ ಸೋಮವಾರ ಆಯೋಜಿಸಿದ್ದ ಒಂದು ದಿನದ ವಿಚಾರ ಸಂಕಿರಣದಲ್ಲಿ ’ರಾಷ್ಟ್ರೀಯ ಶಿಕ್ಷಣ ನೀತಿ -೨೦೧೯ರ ಅವಲೋಕನ’ ಎಂಬ ವಿಷಯ ಕುರಿತು ವಿಚಾರ ಮಂಡಿಸಿದ್ದ ಅವರು, ದೇಶದ ಒಟ್ಟು ಉತ್ಪನ್ನದಲ್ಲಿ (ಜಿಡಿಪಿ) ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ವ್ಯಯ ಮಾಡಲಾಗುತ್ತಿದೆ. ದೇಶದಲ್ಲಿ ಮಂಧಗತದಲ್ಲಿ ಸಾಗುತ್ತಿರುವ ಕಾರ್ಯಯೋಜನೆಗಳಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಭಾರತ ದೇಶ ಬಡದೇಶವಾಗಿದೆ ಎಂದು ತಿಳಿಸಿದರು.

ವಿವಿ ಕುಲಪತಿ ಡಾ. ಅನೀಲಕುಮಾರ ಬಿಡವೆ ’ಗುಣಮಟ್ಟದ ವಿಶ್ವವಿದ್ಯಾಲಯ ಮತ್ತು ಕಾಲೇಜು’ ಎಂಬ ವಿಷಯದ ಬಗ್ಗೆ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಸುಸ್ಥಿರತೆಯನ್ನು ಪರಿವರ್ತಿಸಲು ಸಹಾಯ ಮಾಡುತ್ತದೆ. ಸಮಾನತೆ ಮತ್ತು ಉನ್ನತ ಮಟ್ಟದ ಜ್ಞಾನದ ಆಧಾರದ ಮೇಲೆ ಸಮಾಜ ನಿರ್ಮಾಣಗೊಳ್ಳಲು ಸಹಕಾರಿಯಾಗಿದೆ. ಈ ನೀತಿಯು ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಗುರಿ ಹೊಂದಿದೆ. ದೇಶದಾದಂತ್ಯ ಮಲ್ಟಿಡಿಸಿಪ್ಲೆನರಿ ಉನ್ನತ ಶಿಕ್ಷಣದ ಈ ನೀತಿ ಶಿಕ್ಷಣ ಕ್ಷೇತ್ರ ಸುಧಾರಿಸುವಲ್ಲಿ ಸಕರಾತ್ಮಕ ಪರಿಣಾಮ ಬೀರುತ್ತದೆ ಎಂದರು.

ಉನ್ನತ ಶಿಕ್ಷಣಕ್ಕೆ ಪಡೆಯುವ ವಿದ್ಯಾರ್ಥಿಗಳಿಗೆ ಅವರವರ ಆರ್ಥಿಕ ಪರಿಸ್ಥಿತಿಯ ಮತ್ತು ಅರ್ಹತೆಯ ಆಧಾರದ ಮೇಲೆ ಸರ್ಕಾರ ವಿದ್ಯಾರ್ಥಿ ವೇತನ ಒದಗಿಸಬೇಕು. ರಾಷ್ಟ್ರೀಯ ಶಿಕ್ಷಣ ಕ್ಷೇತ್ರದಲ್ಲಿನ ಬೆಳವಣಿಗೆ, ಶಿಕ್ಷಣದಲ್ಲಿನ ಅಡೆತಡೆ ಹಾಗೂ ಸಮಸ್ಯೆಗಳನ್ನು ನಿವಾರಿಸಲು ರಾಷ್ಟ್ರೀಯ ಶಿಕ್ಷಣ ನೀತಿಯು ಸದುಪಯೋಗೊಳ್ಳುವುದರ ಜೊತೆಗೆ ಒಳ್ಳೆಯ ಪರಿಣಾಮ ನೀಡಬಲ್ಲದು. ರಾಷ್ಟ್ರೀಯ ಶಿಕ್ಷಣ ನೀತಿಯ ಧೇಯ, ಗುರಿ ಉದ್ದೇಶ ಮತ್ತು ಸಮಸ್ಯೆ ಮತ್ತು ಪರಿಹಾರೋಪಗಳ ಬಗ್ಗೆ ವಿವರವಾಗಿ ವಿಚಾರ ಮಂಡಿಸಿದರು.

ವಿವಿ ಸಮಕುಲಪತಿ ಡಾ.ವಿ.ಡಿ.ಮೈತ್ರಿ ’ಅತ್ಯುತ್ತಮ ಕಲಿಕಾ ವಾತಾವರಣ ಮತ್ತು ವಿದ್ಯಾರ್ಥಿಗಳಿಗೆ ಬೆಂಬಲ’ ವಿಷಯದ ಬಗ್ಗೆ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾದ ಎಲ್ಲ ಪ್ರಮುಖ ಬದಲಾವಣೆ ಅಂಶಗಳು ಅಭಿವೃದ್ಧಿ ಹೊಂದಿದ್ದ ದೇಶದಲ್ಲಿ ಪ್ರಸ್ತುತ ಚಾಲ್ತಿಯಲ್ಲಿವೆ. ಅಭಿವೃದ್ಧಿ ಹೊಂದಿದ್ದ ದೇಶಗಳಿಗೆ ಹೊಲಿಸಿದರೇ ಭಾರತ ದೇಶ ಶೈಕ್ಷನಿಕವಾಗಿ ಹಿನ್ನೆಡೆಯಲ್ಲಿದೆ ಎಂದರು.

ಉತ್ಕೃಷ್ಟ ಮಟ್ಟದ ಪಠ್ಯಕ್ರಮ ಹಾಗೂ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಬೆಂಬಲದಿಂದ ಗುಣಮಟ್ಟದ ಕಲಿಕೆಯ ವಾತಾವರಣ ಸೃಷ್ಟಿಸಲು ಸಾಧ್ಯವಾಗುತ್ತದೆ. ಗುರಿ ನಿರ್ದಿಷ್ಟವಾದ, ಆಕರ್ಷಕವಾದ ಪಠ್ಯಕ್ರಮ ವಿನ್ಯಾಸಗೊಳಿಸುವ ಅವಶ್ಯಕತೆಯಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಸ್ಥೆಗಳು ಕಠಿಣ, ಕಿರಿದಾದ ಮತ್ತು ಬಳಕೆಯಲ್ಲಿಲ್ಲದ ಪಠ್ಯಕ್ರಮವನ್ನು ಅನುಸರಿಸುತ್ತವೆ. ಶಿಸ್ತಿನ ಜ್ಞಾನ ಮತ್ತು ಶಿಕ್ಷಣ ಅಭ್ಯಾಸಗಳಲ್ಲಿನ ಆಧುನಿಕ ಪ್ರಗತಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ಇದು ಶೈಕ್ಷಣಿಕವಾಗಿ ದೇಶವನ್ನು ಹಿಮುಖಗೊಳಿಸುತ್ತಿದೆ ಯುಜಿಸಿ, ಎಐಸಿಟಿ, ಎನ್‌ಎಎಸಿ ನಿಗದಿಪಡಿಸಿದ ಪಠ್ಯಕ್ರಮದ ಯೋಜನಾ ಕ್ರಮಗಳಿಗೆ ಶಿಕ್ಷಣ ಸಂಸ್ಥೆಗಳು ಸ್ಪಂದಿಸಬೇಕು ಎಂದರು.

ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರು, ವಿದ್ಯಾರ್ಥಿಗಳು ಸ್ವತಂತ್ರವಾಗಿ ಓದುವದು, ಸ್ವತಂತ್ರವಾಗಿ ಬರೆಯುವುದು ಮತ್ತು ಸ್ವತಂತ್ರವಾಗಿ ಮಾತನಾಡುವಿಕೆಯನ್ನು ತಾರ್ಕಿಕ ಮತ್ತು ವಿಶ್ಲೇಷಣೆ ಮುಂತಾದ ಹೆಚ್ಚುವರಿ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಂಬಲಕ್ಕಾಗಿ ರೂಪಿಸಿದ್ದ ಈ ಶಿಕ್ಷಣ ನೀತಿಯನ್ನು ಈ ಮೊದಲೇ ನಿರ್ದೇಶಿಸಿದ್ದಾರೆ ಎಂದರು.

ಡಾ. ಶಿವಕುಮಾರ ಜವಳಗಿ ನಿರೂಪಿಸಿದರು. ಪ್ರೊ. ಶೋಭನಾ ಪ್ರಾರ್ಥಿಸಿದರು. ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಸ್ವಾಗತಿಸಿದರು. ಅಧಿವೇಶನದಲ್ಲಿ ಸು ೨೦೦ಕ್ಕೂ ಹೆಚ್ಚು ಪ್ರಾಧ್ಯಾಕರು ಉಪಸ್ಥಿತರಿದ್ದರು.

emedialine

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

15 mins ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

26 mins ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

29 mins ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

2 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

2 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

2 hours ago