ಬಿಸಿ ಬಿಸಿ ಸುದ್ದಿ

ಉರುಸ್ ಮೆರವಣಿಗೆ ವೀಕ್ಷಿಸುತ್ತಿದ್ದಾಗ ಸುಲಿಗೆಃ ಹೈದ್ರಾಬಾದ್ ಮೂಲದ ವ್ಯಕ್ತಿ ಸೆರೆ

ಕಲಬುರಗಿ: ನಗರದ ಐತಿಹಾಸಿಕ, ಪ್ರಸಿದ್ಧ ಖಾಜಾ ಬಂದೇ ನವಾಜ್ ದರ್ಗಾ ಉರುಸ್ ಸಂದಾಲ್ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಸುಲಿಗೆ ಮಾಡಿ ಪರಾರಿಯಾಗಿದ್ದ ಹೈದ್ರಾಬಾದ್ ಮೂಲದ ವ್ಯಕ್ತಿಯನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನಿಗೆ ಹೈದ್ರಾಬಾದ್‌ನ ಮೊಹ್ಮದ್ ರಜಾ ಅಲಿ ತಂದೆ ಮೊಹ್ಮದ್ ಹಬೀಬ್ (೪೩) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ೩೪೩೦ರೂ.ಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.

ಕಳೆದ ೧೯ರಂದು ಸಂಜೆ ೬-೩೦ಕ್ಕೆ ಖಾಜಾ ಬಂದೇ ನವಾಜ್ ದರ್ಗಾ ಉರುಸ್ ನಿಮಿತ್ಯ ನಗರದ ಸಾರ್ವಜನಿಕ ಉದ್ಯಾನವನದ ಡೈನೋಸಾರ್ ಗಾರ್ಡನ್ ಬಳಿ ಸಂದಾಲ್ ಮೆರವಣಿಗೆಯನ್ನು ವೀಕ್ಷಿಸಲು ಹೋಗಿದ್ದ ಹೈದ್ರಾಬಾದ್ ಮೂಲದ ಮೊಹ್ಮದ್ ಹುಸೇನ್ ತಂದೆ ಅಹ್ಮದ್ ಸಿರಾಜ್ (೩೧) ಎಂಬಾತನಿಗೆ ಹೆದರಿಸಿ ಆತನ ಬಳಿ ಇದ್ದ ೩೪೩೦ರೂ.ಗಳನ್ನು ಸುಲಿಗೆ ಮಾಡಿಕೊಂಡು ಹೋದ ಕುರಿತು ಬ್ರಹ್ಮಪೂರ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದ. ಮೊಹ್ಮದ್ ಹುಸೇನ್ ತನ್ನ ಅಣ್ಣ ಮೊಹ್ಮದ್ ನವೀದ್ ಜತೆ ಹೈದ್ರಾಬಾದ್‌ನಿಂದ ಉರುಸ್‌ಗಾಗಿ ನಗರಕ್ಕೆ ಬಂದಾಗ ಈ ಘಟನೆ ಸಂಭವಿಸಿದೆ.

ಪ್ರಕರಣ ದಾಖಲಿಸಿಕೊಂಡ ಬ್ರಹ್ಮಪೂರ್ ಪೋಲಿಸ್ ಠಾಣೆಯ ಪಿಐ ಶ್ರೀಮಂತ್ ಇಲ್ಲಾಳ್, ಎಎಸ್‌ಐ ಸಲಿಮೋದ್ದೀನ್, ಸಿಬ್ಬಂದಿಗಳಾದ ಪಂಡಿತ್, ವೆಂಕಟ್ ಅವರು ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

59 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago