ಕಲಬುರಗಿ: ನಗರದ ಐತಿಹಾಸಿಕ, ಪ್ರಸಿದ್ಧ ಖಾಜಾ ಬಂದೇ ನವಾಜ್ ದರ್ಗಾ ಉರುಸ್ ಸಂದಾಲ್ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಸುಲಿಗೆ ಮಾಡಿ ಪರಾರಿಯಾಗಿದ್ದ ಹೈದ್ರಾಬಾದ್ ಮೂಲದ ವ್ಯಕ್ತಿಯನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನಿಗೆ ಹೈದ್ರಾಬಾದ್ನ ಮೊಹ್ಮದ್ ರಜಾ ಅಲಿ ತಂದೆ ಮೊಹ್ಮದ್ ಹಬೀಬ್ (೪೩) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ೩೪೩೦ರೂ.ಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಕಳೆದ ೧೯ರಂದು ಸಂಜೆ ೬-೩೦ಕ್ಕೆ ಖಾಜಾ ಬಂದೇ ನವಾಜ್ ದರ್ಗಾ ಉರುಸ್ ನಿಮಿತ್ಯ ನಗರದ ಸಾರ್ವಜನಿಕ ಉದ್ಯಾನವನದ ಡೈನೋಸಾರ್ ಗಾರ್ಡನ್ ಬಳಿ ಸಂದಾಲ್ ಮೆರವಣಿಗೆಯನ್ನು ವೀಕ್ಷಿಸಲು ಹೋಗಿದ್ದ ಹೈದ್ರಾಬಾದ್ ಮೂಲದ ಮೊಹ್ಮದ್ ಹುಸೇನ್ ತಂದೆ ಅಹ್ಮದ್ ಸಿರಾಜ್ (೩೧) ಎಂಬಾತನಿಗೆ ಹೆದರಿಸಿ ಆತನ ಬಳಿ ಇದ್ದ ೩೪೩೦ರೂ.ಗಳನ್ನು ಸುಲಿಗೆ ಮಾಡಿಕೊಂಡು ಹೋದ ಕುರಿತು ಬ್ರಹ್ಮಪೂರ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದ. ಮೊಹ್ಮದ್ ಹುಸೇನ್ ತನ್ನ ಅಣ್ಣ ಮೊಹ್ಮದ್ ನವೀದ್ ಜತೆ ಹೈದ್ರಾಬಾದ್ನಿಂದ ಉರುಸ್ಗಾಗಿ ನಗರಕ್ಕೆ ಬಂದಾಗ ಈ ಘಟನೆ ಸಂಭವಿಸಿದೆ.
ಪ್ರಕರಣ ದಾಖಲಿಸಿಕೊಂಡ ಬ್ರಹ್ಮಪೂರ್ ಪೋಲಿಸ್ ಠಾಣೆಯ ಪಿಐ ಶ್ರೀಮಂತ್ ಇಲ್ಲಾಳ್, ಎಎಸ್ಐ ಸಲಿಮೋದ್ದೀನ್, ಸಿಬ್ಬಂದಿಗಳಾದ ಪಂಡಿತ್, ವೆಂಕಟ್ ಅವರು ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…