ಸುರಪುರ: ಇದೇ ಏಪ್ರಿಲ್ ೧೪ ರಂದು ನಡೆಯುವ ಡಾ:ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ನೀಡಲಾಗುವ ಡಾ:ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಯನ್ನು ದಲಿತಪರ ಹೋರಾಟಗಾರ ಮಲ್ಲಿಕಾರ್ಜುನ ಕ್ರಾಂತಿಗೆ ನೀಡುವಂತೆ ಪ್ರಗತಿಪರರು ಮನವಿ ಸಲ್ಲಿಸಿದರು.
ನಗರದ ತಹಸೀಲ್ ಕಚೇರಿಗೆ ತೆರಳಿ ಪ್ರಗತಿಪರ ಸಾಮೂಹಿಕ ಸಂಘಟನೆಗಳ ವೇದಿಕೆ ಅಡಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅನೇಕರು ಮಾತನಾಡಿ,ಕಳೆದ ಎರಡು ದಶಕಗಳಿಗು ಹೆಚ್ಚು ಕಾಲದಿಂದ ದೀನ ದಲಿತ ಶೋಷಿತರ ಪರವಾಗಿ ಹೋರಾಟ ಮಾಡುತ್ತಾ ಬರುತ್ತಿರುವ ಹಿರಿಯ ಹೋರಾಟಗಾರ ಮಲ್ಲಿಕಾರ್ಜುನ ಕ್ರಾಂತಿಯವರು ಅಂಬೇಡ್ಕರ್ರ ವಿಚಾರಧಾರೆಯನ್ನು ಮೈಗೂಡಿಸಿಕೊಂಡು ಅವರ ಆದರ್ಶದಲ್ಲಿಯೇ ಹೋರಾಟವನ್ನು ಮಾಡುತ್ತಾ ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ.ಇಂತಹ ಹಿರಿಯ ಹೋರಾಟಗಾರನಿಗೆ ಈಬಾರಿಯ ಡಾ:ಬಿ.ಆರ್ ಅಂಬೇಡ್ಕ್ರರ್ ಪ್ರಶಸ್ತಿಯನ್ನು ನೀಡಬೇಕು,ಅಂದಾಗ ಪ್ರಶಸ್ತಿಯ ಮೌಲ್ಯ ಇನ್ನಷ್ಟು ಹೆಚ್ಚಲಿದೆ ಎಂದು ವಿನಂತಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ಹೋರಾಟಗಾರರಾದ ದೇವಿಂದ್ರಪ್ಪ ಪತ್ತಾರ,ಮಲ್ಲಯ್ಯ ಕಮತಗಿ,ಅಹ್ಮದ್ ಪಠಾಣ್,ನಿಂಗಣ್ಣ ಗೋನಾಲ,ಗೋಪಾಲ ಚಿನ್ನಾಕಾರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…