ಆಳಂದ: ತಾಲೂಕಿನ ಗಡಿಗ್ರಾಮ ತಡೋಳಾ ಗ್ರಾಮದಲ್ಲಿ ವಿವಿಧ ಯೋಜನೆಗಳಲ್ಲಿ ಮಂಜೂರಿಯಾದ ೧೧ ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.
ಶನಿವಾರ ಆಳಂದ ತಾಲೂಕಿನ ತಡೋಳಾ ಗ್ರಾಮದಲ್ಲಿ ಕೃಷಿ ಇಲಾಖೆಯಡಿ ಮಂಜೂರಾದ ರೂ. ೧೧ ಕೋಟಿಗಳ ಕೇಂದ್ರ ಮತ್ತು ರಾಜ್ಯ ಸಂಯೋಜಿತ ಜಲಾನಯನ, ಆರ್ಡಬ್ಲ್ಯೂಎಸ್ ಯೋಜನೆಯಡಿ ಮಂಜೂರಾದ ರೂ. ೧೫ ಲಕ್ಷಗಳ ಕುಡಿಯುವ ನೀರಿನ ಯೋಜನೆ, ೨೦೨೧-೨೨ನೆ ಸಾಲಿನ ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಮಂಜೂರಾದ ರೂ. ೧೦ ಲಕ್ಷಗಳ ಸಾಮಾನ್ಯ ಮತ್ತು ರೂ. ೧೦ ಲಕ್ಷಗಳ ಎಸ್.ಸಿ.ಪಿ ಸಿ.ಸಿ ರಸ್ತೆಗಳು, ರೂ. ೧೦ ಲಕ್ಷಗಳ ಕನಕ ಭವನ ಹಾಗೂ ರೂ. ೧೯ ಲಕ್ಷಗಳ ಕಸ ವಿಲೇವಾರಿ ಘಟಕ ಕಾಮಗಾರಿಗಳ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು.
ಕೋವಿಡ್ ನಂತರದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗೆ ವೇಗ ಸಿಕ್ಕಿದೆ ಅಲ್ಲದೇ ಆಳಂದ ಮತಕ್ಷೇತ್ರಕ್ಕೂ ಮುಖ್ಯಮಂತ್ರಿಗಳು ಹೆಚ್ಚಿನ ಅನುದಾನ ನೀಡಿದ್ದಾರೆ ಮುಂದೆಯೂ ನೀಡುವ ವಿಶ್ವಾಸವಿದೆ ಎಂದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…