ಬೆಂಗಳೂರು: ಜಾತಿ ಮತ ಅನ್ನೋದು ಬೀದಿಗೆ ಎಳೆದು ತರಬಾರದು. ಆಗ ಮಾತ್ರ ಸಮಾಜದಲ್ಲಿ ಸ್ವಾಸ್ಥ ಉಳಿಯುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಜಾತಿ ಹೆಸರಲ್ಲಿ ಸಮಾಜದಲ್ಲಿ ಸ್ವಾಸ್ಥ್ಯ ಹಾಳು ಮಾಡುವ ಸ್ಥಿತಿ ನಿರ್ಮಾಣವಾಗ್ತಿದೆ ಇದು ಸಲ್ಲದು ಎಂದು ನಾಡೋಜ ಡಾ.ವೂಡೇ ಪಿ. ಕೃಷ್ಣ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಸ್ವಾಭಿಮಾನಿ ಕರ್ನಾಟಕ ವೇದಿಕೆ ಹಮ್ಮಿಕೊಂಡಿದ್ದ ಪುಸ್ತಕ ಪ್ರಧಾನ ಸಮಾರಂಭದಲ್ಲಿ ಲೇಖಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತಾಡಿದ ನಾಡೋಜ ಕೃಷ್ಣ, ಸಮಾಜದಲ್ಲಿ ಶಾಂತಿ ಕದಡುವ ಕೆಲಸ ನಡೆಯುತ್ತಿರುವ ಇಂತಹ ಪರಿಸ್ಥಿತಿಯಲ್ಲಿ ನಾವು ದಿಟ್ಟ ನಿಲುವು ತಾಳುವ ಅಗತ್ಯವಿದೆ ಎಂದು ಹೇಳಿದರು.
ಇನ್ನು ಕ್ಷುಲ್ಲಕ ಕಾರಣದಿಂದ ಶಾಂತಿ ಸೌಹಾರ್ದತೆ ಹಾಳು ಮಾಡುವ ಕೆಲಸ ಕೈ ಬಿಡಬೇಕೆಂದರು. ಒಳ್ಳೆಯ ಮನಸ್ಸಿರುವ ಕನ್ನಡಿಗರು ಶಾಂತಿಪ್ರೀಯರು. ಸದ್ಯದ ಸ್ಥಿತಿಯಲ್ಲಿ ಯುವಕರು ದಾರಿ ತಪ್ಪದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ ಎಂದರು. ಈ ವಿಚಾರದಲ್ಲಿ ವಿದ್ಯಾವಂತರು ಮೌನವಹಿಸಬಾರದು. ಇಂತಹ ಸಂದಿಗ್ದ ಪರಿಸ್ತಿತಿಯಲ್ಲಿ ಬುದ್ದಿಜೀವಿಗಳು ಮೌನ ತೊರೆದು ಸಮಾಜವನ್ನ ಸನ್ಮಾರ್ಗದತ್ತ ಕೊಂಡೊಯ್ಯುವ ಕೆಲಸ ಮಾಡುವ ತುರ್ತು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕನ್ನಡ ಸಾಹಿತ್ಯ ಶ್ರಿಮಂತಿಕೆಯಾಗಲು ಎಲ್ಲಾ ವೈದ್ಯಕಿಯ, ಇಂಜನಿಯರಿಂಗ್ ವಿಭಾಗದವರು ಸೇರಿ ಎಲ್ಲಾ ವರ್ಗದವರು ಸಾಹಿತ್ಯವನ್ನ ಬರೆಯಬೇಕು ಎಂದು ಹೇಳಿದರು.
ಇನ್ನು ಕಾವ್ಯ ವಿಭಾಗದಲ್ಲಿ ಡಾ. ಮುಮ್ತಾಜ್ ಬೇಗಂ ರಚಿಸಿದ ಕೊಂದ ಕನಸುಗಳ ಕೇಸು ಕವನ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿದ್ದರ ಹಿನ್ನೆಲೆಯಲ್ಲಿ ಡಾ.ಮುಮ್ತಾಜ್ ಬೇಗಂ ಅವರಿಗೆ ನಗದು ಪುರಸ್ಕಾರ ಪ್ರಶಸ್ತಿ ಪತ್ರ ನೀಡಿ ಗೌರವಿಸಿ ಸನ್ಮಾಯಿಸಲಾಯಿತು. ಇದೇ ರಾಜ್ಯ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಅವರ ಆತ್ಮಕಥೆ ಕುರಿತಾದ ಪ್ರತಿಬಿಂಬ ಪುಸ್ತಕವು ಪ್ರಶಸ್ತಿಗೆ ಆಯ್ಕೆಯಾಗಿತ್ತು ಈ ಹಿನ್ನೆಲೆಯಲ್ಲಿ ಸತೀಸ ಹೊಸಮನಿ ಅವರಿಗೂ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾಯಿಸಲಾಯಿತು. ಇದೇ ರೀತಿ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾದ ಡಾ.ಎಚ್.ಎಸ್. ಅನುಮಪ ಸೇರಿ ಹಲವು ಲೇಖಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…