ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ನಿಮಿತ್ತ ರಕ್ತದಾನ ಶಿಬಿರ

0
23

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಸರಕೋಡು ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಬ್ಲಡ್ ಬ್ಯಾಂಕ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ತಂಬ್ರಹಳ್ಳಿ ಮತ್ತು ಸ್ಥಳೀಯ ಸಂಘ-ಸಂಸ್ಥೆಗಳು ಶ್ರೀ ಆಂಜನೇಯ ಸ್ವಾಮಿ ರಥೋತ್ಸವವಾಗಿ ಇಂದು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ಪತ್ರೇಶ್ ಹಿರೇಮಠರವರು ಮಾತನಾಡಿ, ರಕ್ತದಾನ ಮಾಡುವ ಮೂಲಕ ಜನರ ಪ್ರಾಣ ರಕ್ಷಣೆಗೆ ಯುವಜನತೆ ಮುಂದಾಗಬೇಕೆಂದು ಕರೆ ನೀಡಿದರು.

Contact Your\'s Advertisement; 9902492681

ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವನ್ನು ಕಾಪಾಡಿಕೊಂಡು ಸದೃಢ ಬದುಕನ್ನು ರೂಪಿಸಿಕೊಳ್ಳಬೇಕೆಂದು ಎಂದು ತಂಬ್ರಹಳ್ಳಿ ಪೊಲೀಸ್ ಠಾಣೆಯ ಎ.ಎಸ್.ಐ ಕರಿವೀರಪ್ಪ ಕಬ್ಬೇರ್ ಕಿವಿಮಾತು ಹೇಳಿದರು.

ಬನ್ನಿಗೋಳ ಗ್ರಾಮ ಪಂಚಾಯತಿ ಅಧ್ಯಕ್ಷ ಕರಿಬಸವರಾಜ ಬಣಕಾರ, ರಕ್ತದಾನ ಮಾಡುವ ಮೂಲಕ ಯುವಕರಿಗೆ ರಕ್ತದಾನ ಮಾಡಲು ಪ್ರೇರೇಪಿಸಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗರಾಜ, ಆಶಾ ಕಾರ್ಯಕರ್ತೆಯರಾದ ಪ್ರತಿಭಾ ಕೆ.ಎಂ.ಎಸ್, ಸರಸ್ವತಿ , ವಿವೇಕಾನಂದ ಬ್ಲಡ್ ಬ್ಯಾಂಕ್ ನ ವಿರುಪಾಕ್ಷ, ಆಪ್ತ ಸಮಾಲೋಚಕ ಮಹೇಂದ್ರ, ರಾಜೇಂದ್ರ ಬಾಬು ಹಾಗೂ ಸರ್ಕಾರಿ ಪ್ರೌಢಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ ಎಂ ಶಿವಮೂರ್ತಿ, ಮಾಜಿ ಗ್ರಾ.ಪಂ ಸದಸ್ಯರಾದ ಬಿ.ಸಿ ಬಸವರಾಜ, ಹೆಚ್.ಬಿ. ಮೈಲಪ್ಪ ನಾಗಭೂಷಣ, ಮುಖಂಡರಾದ ಶೇಖರಯ್ಯ ಎಸ್.ಎಂ, ಎ.ಕೆ ಸಾರೆಪ್ಪ ಮಹಾಂತೇಶ್ ಹೊಳಗುಂದಿ, ಧನಂಜಯ ಮೇಟಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here