ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗ ಎಲ್ಲ ದೃಷ್ಟಿಯಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಇಲ್ಲಿನ ಕಥೆಗಾರರಿಗೂ ಕೂಡ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ ಎಂದು ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಹೇಳಿದರು.
ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಗರದ ಕಲಾ ಮಂಡಳದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಹಿರಿಯ ಸಾಹಿತಿ ಸುಬ್ರಾವ ಕುಲಕರ್ಣಿ ರಚಿಸಿದ 10ನೇ ಕಥಾ ಸಂಕಲನ ‘ರಕ್ಷಕ’ ಅವಲೋಕನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪುಸ್ತಕ ಅವಲೋಕಿಸಿದ ಡಾ. ಶೈಲಜಾ ಬಾಗೇವಾಡಿ ಮಾತನಾಡಿ, ಇಲ್ಲಿನ 10 ಕಥೆಗಳು ಬದುಕಿಗೆ ಹತ್ತಿರವಾಗಿದ್ದು, ಆಪ್ತ ಬರಹಗಳಿವೆ. ಗ್ರಾಮೀಣ ಭಾಷೆಯ ಸೊಗಡು, ಪ್ರಾದೇಶಿಕ ಅಸ್ಮಿತೆ ಎದ್ದು ಕಾಣುತ್ತದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಪ್ರೊ.ಕೆ.ಎಸ್. ನಾಯಕ ಮಾತನಾಡಿ, ಪರಸ್ಪರ ಹತ್ತಿರವಿದ್ದರೂ ದ್ವೀಪಗಳಂತೆ ಬದುಕುತ್ತಿರುವ ಇಂದಿನ ದಿನಮಾನಗಳಲ್ಲಿ ಬರಹಗಾರ ಸೇತುವೆ ನಿರ್ಮಿಸಬೇಕಾಗಿದೆ ಎಂದು ತಿಳಿಸಿದರು.
ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶಕ ಬಸವರಾಜ ಕೊನೇಕ್ ಅಧ್ಯಕ್ಷತೆ ವಹಿಸಿದ್ದರು. ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್. ನಿರಗುಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಜಿ.ಜಿ. ವಣಿಕ್ಯಾಳ ನಿರೂಪಿಸಿದರು. ಡಾ. ಶರಣಬಸವ ವಡ್ಡನಕೇರಿ ವಂದಿಸಿದರು. ಕಾವ್ಯಶ್ರೀ ಮಹಾಗಾಂವಕರ್, ಜ್ಯೋತಿ ಕುಲಕರ್ಣಿ, ಶ್ರೀನಿವಾಸ ಸಿರನೂರಕರ, ಸುರೇಶ ಬಡಿಗೇರ, ಡಾ. ಶಿವರಂಜನ ಸತ್ಯಂಪೇಟೆ, ಶರಣು ಅತನೂರ ಇತರರು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…