ಮಂಗಿಹಾಳ: ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ನೂತನ ಗ್ರಾಮ ಶಾಖೆ ರಚನೆ

ಸುರಪುರ: ತಾಲ್ಲೂಕಿನ ಮಂಗಿಹಾಳ ಗ್ರಾಮದ ರಾಚಯ್ಯ ಮುತ್ಯಾನ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ಮಂಗಿಹಾಳ ನೂತನ ಗ್ರಾಮ ಶಾಖೆ ರಚಿಸಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಇದೆ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ- ಹಸಿರು ಸೇನೆ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ಅವರು, ಕೇಂದ್ರ ಸರ್ಕಾರ ಮೂರು ಕೃಷಿ ಕಾಯಿದೆಗಳನ್ನು ಜಾರಿ ಮಾಡಿ ಖಾಸಗಿಕಾರಣ ಮಾಡಲು ಹೊರಟಿತ್ತು.ಅದರ ವಿರುದ್ಧ ರೈತರು ಒಂದು 2 ತಿಂಗಳು ನಿರಂತರ ಪ್ರತಿಭಟನೆ ಮಾಡಿದ್ದು, ಕೊನೆಗೂ ಸರ್ಕಾರ ರೈತರ ಧರಣಿಗೆ ಮಣಿದು ಕೃಷಿ ಕಾಯ್ದೆ ವಾಪಸ್ ಪಡೆಯಿತು ಎಂದರು.ಇನ್ನು ಬೃಹತ್ ಪ್ರತಿಭಟನೆಯಲ್ಲಿ 750 ಕ್ಕೂ ಹೆಚ್ಚು ರೈತರು ಮೃತರಾದರು, ಅಲ್ಲದೇ ಮೊಳೆಗಳ ಬೇಲಿ ಹಾಕಿದ್ದರು, ಈ ರೀತಿ ವರ್ತಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿತ್ತು. ಮುಂದಿನ ದಿನಗಳಲ್ಲಿ ರೈತರ ಸಮಸ್ಯೆಗಳ ನಾವೆಲ್ಲಾ ಧ್ವನಿ ಎತ್ತಬೇಕು ಎಂದು ಹೇಳಿದರು.

ಮಂಗಿಹಾಳದಲ್ಲಿ ನೂತನ ಗ್ರಾಮ ಶಾಖೆ ರಚಿಸಿದ್ದು, ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ಗ್ರಾಮ ಶಾಖೆಯ ಗೌರವಧ್ಯಕ್ಷರಾಗಿ ರಡ್ದೆಪ್ಪಗೌಡ ಪರಸನಹಳ್ಳಿ, ಅಧ್ಯಕ್ಷರಾಗಿ ಯಮನಪ್ಪ ಮಾಸ್ಟರ್, ಉಪಾಧ್ಯಕ್ಷರು ಚಂದ್ರು ಠಣೆಕೇದಾರ, ಸೂಲಪ್ಪ ನಾಗರಕಲ್, ಪ್ರಧಾನ ಕಾರ್ಯದರ್ಶಿ ಲೋಹಿತ್ ದಿವಾನ, ಸಹ ಕಾರ್ಯದರ್ಶಿ ತಿಪ್ಪಣ್ಣ ಬಾಚಿಮಟ್ಟಿ, ಸಂಘಟನಾ ಕಾರ್ಯದರ್ಶಿ ಶರಣಪ್ಪ ಅರಕೇರಿ, ಖಜಾಂಚಿ ಶಾಂತಗೌಡ, ಸಹ ಖಾಜಾಂಚಿ, ಹೈಯಾಳಪ್ಪ, ಸಂಚಾಲಕ ನಾಗಪ್ಪ ಶರಣ, ಸಹ ಸಂಘಟನಾ ಕಾರ್ಯದರ್ಶಿ ಸಾಬಣ್ಣ ಕೊಡಚಿ, ಸಹ ಸಂಚಾಲಕ ಬಸಣ್ಣ ಅಂಗಡಿ.

ಸದಸ್ಯರುಗಳಾದ ಕೃಷ್ಣಪ್ಪ ಗೌಂಡಿ, ಸೂಲಪ್ಪ, ಚಂದ್ರಯ್ಯ ಗುತ್ತೇದಾರ, ಬಸವರಾಜ ಬಡಿಗೇರ, ಸಿದ್ದಪ್ಪ ನಾಗರಾ ಕಲ್, ನಿಂಗಣ್ಣ ಯಾಳಗಿ, ಮುತ್ತಪ್ಪ ಟಣಕೇದಾರ, ಹಣಮಂತ್ರಾಯ ಕುಂಬಾರಪೇಟ, ಚಂದ್ರು ಹಗರಟಗಿ, ಬಾಲಪ್ಪ ದಿವಾನ,ಕಾಶಿಮ ಸಾಬ ಮತ್ತು ಸಿದ್ದಪ್ಪ ಇವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಹಣಮಂತ್ರಾಯ ಚಂದ್ಲಾಪುರ ಸೇರಿದಂತೆ ಸಂಘಟನೆಯ ಉಪಾಧ್ಯಕ್ಷರು ಹಾಗೂ ಗ್ರಾಮಸ್ಥರು ಇದ್ದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

34 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago