ಕಲಬುರಗಿ: ವಿಶ್ವದ ಭವ್ಯ ಭವಿಷ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡು ಉರಿಯುವ ಕರ್ಪೂರದಂತೆ ಬೆಳಗಿದ ವಿಶ್ವಗುರು ಬಸವಣ್ಣ ಮತ್ತು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಅವರ ವಿಚಾರಗಳನ್ನು ಇಂದಿನ ಸಮಾಜಕ್ಕೆ ತಲುಪಿಸುವ ಉದ್ದೇಶದಿಂದ ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ ೧೩ ರಿಂದ ತಿಂಗಳಪರ್ಯಂತ ‘ ಸತ್ಯ ಬಿತ್ತಿದ ಪರಿ ’ ಎನ್ನುವ ಘೋಷವಾಕ್ಯದೊಂದಿಗೆ ಬಸವ ಬೆಳಕು-ಭೀಮ ಬದುಕು ಎಂಬ ಸರಣಿ ಕಾರ್ಯಕ್ರಮವೊಂದನ್ನು ನಗರದ ಸೇರಿದಂತೆ ವಿವಿಧ ತಾಲೂಕುಗಳ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಶಿಕ್ಷಕರ ಪ್ರಕ್ರಿಯೆ ತಾತ್ಕಾಲಿಕ ಕೈಬಿಡುವಂತೆ ಸಚಿವರಿಗೆ ಮನವಿ| Teacher appointment process
೧೨ನೇ ಶತಮಾನದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಅಪ್ಪಿ ಮಾನವೀಯ ಮೌಲ್ಯಗಳನ್ನು ಒಪ್ಪಿ, ಕಾಯಕ-ದಾಸೋಹದ ಪರಿಕಲ್ಪನೆಯನ್ನು ತಮ್ಮ ವಚನಗಳ ಮೂಲಕ ಜನಮನಕ್ಕೆ ತಲುಪಿಸುವಲ್ಲಿ ವಿಶ್ವಗುರು ಬಸವಣ್ಣ ಪ್ರಯತ್ನಿಸಿದ್ದಾರೆ. ಹಾಗೆಯೇ, ೨೦ ನೇ ಶತಮಾನದಲ್ಲಿ ಭಾರತದ ಸಂವಿಧಾನ ರಚಿಸುವ ಮೂಲಕ ಶೋಷಿತ ಜನಾಂಗದ ಉಜ್ವಲ ಭವಿಷ್ಯಕ್ಕಾಗಿ ಸರ್ವ ಸಮಾನತೆಯ ಸೂತ್ರಗಳನ್ನು ನೀಡಿದ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ರವರಾಗಿದ್ದಾರೆ. ಮಹಾತ್ಮರ ವಿಚಾರಕ್ರಾಂತಿಯ ಕಿಡಿಯನ್ನು ಇಂದಿನ ಯುವ ಪೀಳಿಗೆಗೆ ಹಸ್ತಾಂತರಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ ಎಂದು ತೇಗಲತಿಪ್ಪಿ ವಿವರಿಸಿದ್ದಾರೆ.
ಶಿಕ್ಷಕರ ಪ್ರಕ್ರಿಯೆ ತಾತ್ಕಾಲಿಕ ಕೈಬಿಡುವಂತೆ ಸಚಿವರಿಗೆ ಮನವಿ| Teacher appointment process
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…