ಹೊನ್ನಕಿರಣಗಿ ಗ್ರಾಮದಲ್ಲಿ ಒಂದೇ ಕೆಲಸಕ್ಕೆ ಎರಡು ಟೆಂಡರ್: ಡಿಸಿಗೆ ಡಾ.ಕಾಬಾ ಮನವಿ

ಕಲಬುರಗಿ : ಅಫಜಲಪುರ ಕ್ಷೇತ್ರ ವ್ಯಾಪ್ತಿಯ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ೨೦೨೧-೨೨ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಅಡಿ ೧೮ ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ ಮಾಡದೆ ಬಜೆಟ್ ನುಂಗಿ ಹಾಕಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಕೈಗೊಂಡು ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಡಿಪಿ ಮಾಜಿ ಸದಸ್ಯ ಡಾ. ಕೇಶವ ಕಾಬಾ ಅವರು ಜಿಲ್ಲಾಧಿಕಾರಿಗಳಾದ ಯಶವಂತ ಗುರುಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಗ್ರಾಮದ ಶಂಕರ ಡೋರ ಮನೆಯಿಂದ ಸರಕಾರಿ ಪ್ರಾಥಮಿಕ ಶಾಲೆ ವರೆಗೆ ರಸ್ತೆ ಕಾಮಗಾರಿ ಮತ್ತು ಚರಂಡಿ ನಿರ್ಮಾಣ ಮಾಡಲಾಗಿತ್ತು. ಆದರೂ ಕೆಲ ರಾಜಕೀಯ ವ್ಯಕ್ತಿಗಳು ಸುಳ್ಳು ದಾಖಲೆ ಸೃಷ್ಟಿಸಿ ೧೮ ಲಕ್ಷ ರೂ.ಗಳ ಯಾವುದೇ ಕಾರ್ಯನಿವಹಿಸದೆ ಹಣ ಪಡೆದುಕೊಂಡಿರುತ್ತಾರೆ.

ಎಸ್‌ಸಿಪಿ ಅನುದಾನವಿದ್ದು ಇದನ್ನು ದುರುಪಯೋಗವಾಗಿದೆ. ಅಧಿಕಾರಿಗಳು ಪರಿಶೀಲಿಸಿ ಅನುದಾನವನ್ನು ಪುನರ ಬಳಸಿ ಕನಕದಾಸ ಕಟ್ಟೆಯಿಂದ ಮರಗಮ್ಮ ದೇವಿ ದೇವಸ್ಥಾನ ಹೋಗುವ ಹಳ್ಳದ ವರೆಗೆ ರಸ್ತೆ ನಿರ್ಮಾಣ ಹಾಗೂ ಚರಂಡಿ ನಿರ್ಮಿಸಬೇಕು.

ಅಲ್ಲದೆ ಸಮಗ್ರ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಟೆಂಡರ್ ಪಡೆದ ಗುತ್ತಿಗೆದಾರರಿಗೆ ಬಜೆಟ್ ತಡೆಯುವುದಲ್ಲದೆ, ಅವರ ಪರವಾನಗಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸ್ಥಳೀಯರಾದ ವಿಶ್ವನಾಥ ಹಿರೇಮಠ, ಶಿವಕುಮಾರ ಜುಲ್ಪಿ, ಜಟ್ಟೆಪ್ಪ ಪೂಜಾರಿ, ರವಿ ಪಣ್ಣದಿ, ವಿಶ್ವನಾಥ ಕೋಟಿ, ರಾಜು ಇಟಗಿ ಇವರು ಆಗ್ರಹಿಸಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

1 hour ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago