ಕಲಬುರಗಿ: ಮಾನಸಿಕ, ಸಾಮಾಜಿಕ, ಲೈಂಗಿಕ, ಆಧ್ಯಾತ್ಮಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ವಿಷಯಗಳಿಗೆ ಶರಣರು ತಮ್ಮ ವಚನಗಳಲ್ಲಿ ಪರಿಹಾರ ಸೂಚಿಸಿದ್ದಾರೆ ಎಂದು ಖ್ಯಾತ ವಾಗ್ಮಿ ಡಾ. ನಾ ಸೋಮೇಶ್ವರ ಅಭಿಪ್ರಾಯಪಟ್ಟರು.
ಕಲಬುರಗಿ ಜಿಲ್ಲಾ ಕನ್ನಡ ವೈದ್ಯ ಸಾಹಿತ್ಯ ಪರಿಷತ್ತು ಹಾಗೂ ಷಡಕ್ಷರಿಸ್ವಾಮಿ ಡಿಗ್ಗಾಂವಕರ ಟ್ರಸ್ಟ್ ಸಹಯೋಗದಲ್ಲಿ ಲಿಂ. ಪೂಜ್ಯ ಬಸವರಾಜಪ್ಪ ಅಪ್ಪ ಮತ್ತು ಲಿಂ. ನಳಿನಿತಾಯಿ ಬಸವರಾಜಪ್ಪ ಅಪ್ಪ ಅವರ ಪ್ರಥಮ ಪುಣ್ಯಸ್ಮರಣಾರ್ಥ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಆನ್ಲೈನ್ ಉಪನ್ಯಾಸ ಸರಣಿಯಲ್ಲಿ ವಚನಗಳಲ್ಲಿ ಆರೋಗ್ಯ ದರ್ಶನ ಎಂಬ ವಿಷಯ ಕುರಿತು ಮಾತನಾಡಿದರು.
ಜಗತ್ತಿನಲ್ಲಿ ವಚನ ಸಾಹಿತ್ಯ ಒಂದು ಅನನ್ಯ ಸಾಹಿತ್ಯ ಪ್ರಕಾರವಾಗಿದೆ ಆರೋಗ್ಯದ ಕುರಿತಂತೆ ಅಕ್ಕಮಹಾದೇವಿ, ಅಲ್ಲಮಪ್ರಭು, ಬಸವಣ್ಣನವರು ತಮ್ಮ ವಚನಗಳಲ್ಲಿ ಅತ್ಯಂತ ಸರಳವಾಗಿ ಎಲ್ಲರಿಗೂ ತಿಳಿಯುವಂತೆ ಮಾಡಿದ್ದಾರೆ.
ಕಾಡಸಿದ್ದೇಶ್ವರ ವಚನದಲ್ಲಿ ವೈದ್ಯಕೀಯ ಲೋಕವೇ ಬೆರಗಾಗುವಂತೆ ಗರ್ಭದಿಂದ ಶಿಶುವಾಗಿ ಜನಿಸುವ ಪರಿಯನ್ನು ವಿವರಿಸಲಾಗಿದೆ. ಹಾಲಸಂಗಯ್ಯ, ಚೆನ್ನಬಸವಣ್ಣ ಸೇರಿದಂತೆ ಅನೇಕ ವಚನಕಾರರು ಆರೋಗ್ಯಕ್ಕೆ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.
ಡಾ, ನೀಲಾಂಬಿಕಾ ಪೊಲೀಸ್ ಪಾಟೀಲ ಮಾತನಾಡಿ, ಬಸವರಾಜಪ್ಪ ಅಪ್ಪ ಸರಳತೆಯನ್ನು ಮೈಗೂಡಿಸಿಕೊಂಡಿದ್ದರು. ಶರಣ ಧರ್ಮವನ್ನು ಪರಿಪಾಲಿಸುತ್ತ ಕೃಷಿ ಕಾಯಕವನ್ನು ಪ್ರೀತಿಸುತ್ತಿದ್ದರು. ಮಾತು ಕಡಿಮೆ ಕೆಲಸ ಹೆಚ್ಚು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟವರಾಗಿದ್ದರು ಎಂದು ನುಡಿನಮನ ಸಲ್ಲಿಸಿದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…